ರಾಜ್ಯ

ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿ ಪಾಲಾಗದಂತೆ ಗೃಹಲಕ್ಷ್ಮಿ ಜಾರಿ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ ಪಾಲಾಗದಂತೆ ಜಾರಿಗೊಳಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ವಿಧಾನಸಭೆಯಲ್ಲಿ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಗಸ್ಟ್ ತಿಂಗಳವರೆಗೆ 1.24 ಕೋಟಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಹಣ ಜಮಾ ಮಾಡಲಾಗಿದೆ. ಮೊದಲು ಇಲಾಖೆಯಿಂದ ನೇರವಾಗಿ ಹಣ ಹಾಕಲಾಗುತ್ತಿತ್ತು. ನಂತರದಲ್ಲಿ ತಾಲೂಕು ಪಂಚಾಯತ್ ಮೂಲಕ ಹಣ ಹಾಕಲಾಗುತ್ತಿದೆ‌. ಹಾಗಾಗಿ ಮಧ್ಯದಲ್ಲಿ ಸ್ವಲ್ಪ ಮಟ್ಟಿಗೆ ವಿಳಂಬವಾಗಿದ್ದು ನಿಜ, ಆದರೆ ಒಂದೇ ಒಂದು ರೂಪಾಯಿ ಆಚೆ ಈಚೆ ಆಗದಂತೆ ಮಹಿಳೆಯರಿಗೆ ತಲುಪಿಸಲಾಗುತ್ತಿದೆ. ಸ್ಪಷ್ಟತೆ ಮತ್ತು ಬದ್ಧತೆಯಿಂದ ಯೋಜನೆ ಮುಂದುವರಿಸಲಾಗುತ್ತಿದೆ ಎಂದು ಸಚಿವರು ಸ್ಪಷ್ಟ ಪಡಿಸಿದರು.

ಇದನ್ನು ಓದಿ: ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿ ಪಾಲಾಗದಂತೆ ಗೃಹಲಕ್ಷ್ಮಿ ಜಾರಿ : ಸಚಿವೆ ಹೆಬ್ಬಾಳಕರ್‌ 

ಆರಂಭದಲ್ಲಿ ಯೋಜನೆಯನ್ನು ನಿಲ್ಲಿಸಲು ಹೇಳಿದವರು ನೀವು, ಯೋಜನೆ ಕುರಿತು ಹಾದಿ ಬೀದಿಯಲ್ಲಿ ಟೀಕೆ ಮಾಡುತ್ತಿದ್ದ ಬಿಜೆಪಿಯವರಿಗೆ ಈಗ ಏಕಾಏಕಿ ಕಾಳಜಿ, ಪ್ರೀತಿ ಬಂತಾ ಎಂದು ಪ್ರಶ್ನಿಸಿದ ಸಚಿವರು, ನಮ್ಮದೇ ಯೋಜನೆ ಕಾಪಿ ಮಾಡಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ ಲಾಡ್ಲಿ ಬೆಹೆನ್ ಯೋಜನೆ ಕಥೆ ಏನಾಗಿದೆ ಎಂದು ಎಲ್ಲರಿಗೂ ಗೊತ್ತು. ಬೇರೆ ರಾಜ್ಯದ ಬಗ್ಗೆ ಮಾತಾನಾಡಬಾರದು ಎಂದು‌ ಸುಮ್ಮನಿದ್ದೆ. ನಾವು ಒಂದೇ ಒಂದು ಅಪಾದನೆ ಬರದಂತೆ ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

8 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

12 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago