ರಾಜ್ಯ

ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿ ಪಾಲಾಗದಂತೆ ಗೃಹಲಕ್ಷ್ಮಿ ಜಾರಿ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ ಪಾಲಾಗದಂತೆ ಜಾರಿಗೊಳಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ವಿಧಾನಸಭೆಯಲ್ಲಿ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಗಸ್ಟ್ ತಿಂಗಳವರೆಗೆ 1.24 ಕೋಟಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಹಣ ಜಮಾ ಮಾಡಲಾಗಿದೆ. ಮೊದಲು ಇಲಾಖೆಯಿಂದ ನೇರವಾಗಿ ಹಣ ಹಾಕಲಾಗುತ್ತಿತ್ತು. ನಂತರದಲ್ಲಿ ತಾಲೂಕು ಪಂಚಾಯತ್ ಮೂಲಕ ಹಣ ಹಾಕಲಾಗುತ್ತಿದೆ‌. ಹಾಗಾಗಿ ಮಧ್ಯದಲ್ಲಿ ಸ್ವಲ್ಪ ಮಟ್ಟಿಗೆ ವಿಳಂಬವಾಗಿದ್ದು ನಿಜ, ಆದರೆ ಒಂದೇ ಒಂದು ರೂಪಾಯಿ ಆಚೆ ಈಚೆ ಆಗದಂತೆ ಮಹಿಳೆಯರಿಗೆ ತಲುಪಿಸಲಾಗುತ್ತಿದೆ. ಸ್ಪಷ್ಟತೆ ಮತ್ತು ಬದ್ಧತೆಯಿಂದ ಯೋಜನೆ ಮುಂದುವರಿಸಲಾಗುತ್ತಿದೆ ಎಂದು ಸಚಿವರು ಸ್ಪಷ್ಟ ಪಡಿಸಿದರು.

ಇದನ್ನು ಓದಿ: ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿ ಪಾಲಾಗದಂತೆ ಗೃಹಲಕ್ಷ್ಮಿ ಜಾರಿ : ಸಚಿವೆ ಹೆಬ್ಬಾಳಕರ್‌ 

ಆರಂಭದಲ್ಲಿ ಯೋಜನೆಯನ್ನು ನಿಲ್ಲಿಸಲು ಹೇಳಿದವರು ನೀವು, ಯೋಜನೆ ಕುರಿತು ಹಾದಿ ಬೀದಿಯಲ್ಲಿ ಟೀಕೆ ಮಾಡುತ್ತಿದ್ದ ಬಿಜೆಪಿಯವರಿಗೆ ಈಗ ಏಕಾಏಕಿ ಕಾಳಜಿ, ಪ್ರೀತಿ ಬಂತಾ ಎಂದು ಪ್ರಶ್ನಿಸಿದ ಸಚಿವರು, ನಮ್ಮದೇ ಯೋಜನೆ ಕಾಪಿ ಮಾಡಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ ಲಾಡ್ಲಿ ಬೆಹೆನ್ ಯೋಜನೆ ಕಥೆ ಏನಾಗಿದೆ ಎಂದು ಎಲ್ಲರಿಗೂ ಗೊತ್ತು. ಬೇರೆ ರಾಜ್ಯದ ಬಗ್ಗೆ ಮಾತಾನಾಡಬಾರದು ಎಂದು‌ ಸುಮ್ಮನಿದ್ದೆ. ನಾವು ಒಂದೇ ಒಂದು ಅಪಾದನೆ ಬರದಂತೆ ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

7 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

7 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

8 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

8 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

9 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

9 hours ago