ರಾಜ್ಯ

5 ವರ್ಷ ನಾನೇ ಸಿಎಂ ಎಂದು ಹೇಳೋದಕ್ಕೂ ವ್ಯಾಕ್ಸಿನ್‌ ಕಾರಣ: ಮಾಜಿ ಸಿಎಂ ಡಿ.ವಿ.ಸದಾನಂದಗೌಡ

ಬೆಂಗಳೂರು: ಹೃದಯಾಘಾತಕ್ಕೆ ವ್ಯಾಕ್ಸಿನ್‌ ಕಾರಣ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಓಡಿ ಹೋಗಿ ಕ್ಯೂನಲ್ಲಿ ನಿಂತು ವ್ಯಾಕ್ಸಿನ್‌ ತೆಗೆದುಕೊಂಡವರು ಸಿಎಂ ಸಿದ್ದರಾಮಯ್ಯ ಅವರೇ. ಓಡಿಹೋಗಿ ಮೊದಲು ವ್ಯಾಕ್ಸಿನ್‌ ತೆಗೆದುಕೊಂಡವರು ಅವರೇ. 5 ವರ್ಷ ನಾನೇ ಸಿಎಂ ಎಂದು ಹೇಳೋದಕ್ಕೂ ವ್ಯಾಕ್ಸಿನ್‌ ಕಾರಣ ಎಂದು ಕಿಡಿಕಾರಿದರು.

ಇನ್ನು ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್‌ ಬ್ಯಾನ್‌ ಎಂಬ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ ಅವರು, ಆರ್‌ಎಸ್‌ಎಸ್‌ ನಿಷೇಧ ಸಾಧ್ಯವೇ ಇಲ್ಲದ ಮಾತು. ಪ್ರಿಯಾಂಕ್‌ ಖರ್ಗೆ ವ್ಯಾಪ್ತಿ ಮೀರಿ ಹೋಗುತ್ತಿದ್ದಾರೆ. ಹುಚ್ಚರಿಗೆ ಉತ್ತರ ಕೊಡಬೇಕಾದ ಅವಶ್ಯಕತೆ ಇಲ್ಲ. ಕಾಂಗ್ರೆಸ್‌ ಪಕ್ಷಕ್ಕೆ ಮುಂದೆ ಅಧಿಕಾರಕ್ಕೆ ಬರುವ ಯೋಗ್ಯತೆ ಇಲ್ಲ. ಆರ್‌ಎಸ್‌ಎಸ್‌ನ್ನು ಕಾಂಗ್ರೆಸ್‌ ಮುಟ್ಟಿ ನೋಡಲಿ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

8 mins ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

13 mins ago

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

10 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

11 hours ago