ರಾಜ್ಯ

ರಾಜ್ಯದಲ್ಲಿ ಜ್ವಲಂತ ಸಮಸ್ಯೆಗಳಿದ್ದರೂ ಸಹ ಹಲವರು ತಮ್ಮದೇ ಆದ ಚಿಂತೆಯಲ್ಲಿ ಮುಳುಗಿದ್ದಾರೆ: ಬಿಜೆಪಿ

ಮೈಸೂರು : ವ್ಯಂಗ್ಯಭರಿತವಾಗಿ ಟೀಕೆ ಮಾಡಿರುವ ಬಿಜೆಪಿ ರಾಜ್ಯದಲ್ಲಿ ಜ್ವಲಂತ ಸಮಸ್ಯೆಗಳಿದ್ದರೂ ಸಹ ಹಲವರು ತಮ್ಮದೇ ಆದ ಚಿಂತೆಯಲ್ಲಿ ಮುಳುಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯ ಕಾಂಗ್ರೆಸ್ ನಾಯಕರು ಪ್ರಸ್ತುತ ಈ ಕೆಳಗಿನ ಚಿಂತೆಗಳಲ್ಲಿ ಮುಳುಗಿದ್ದಾರೆ. ಸಿಎಂ ಸಿದ್ದರಾಮಯ್ಯ – ಸಿಎಂ ಕುರ್ಚಿಯನ್ನು ಉಳಿಸಿಕೊಳ್ಳುವ ಚಿಂತೆ, ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಇಳಿಸುವುದು ಹೇಗೆ ಎಂಬ ಚಿಂತೆ ಎಂದು ವ್ಯಂಗ್ಯವಾಡಿದೆ.

ಪ್ರಿಯಾಂಕ್ ಖರ್ಗೆ – ಸಿದ್ದರಾಮಯ್ಯರವರ ಕೆ.ಇ.ಎ. ಪರೀಕ್ಷಾ ಅಕ್ರಮವನ್ನು ಸಿಬಿಐಗೆ ವಹಿಸಿದರೆ ಏನು ಮಾಡುವುದೆಂಬ ಚಿಂತೆ, ಡಾ.ಪರಮೇಶ್ವರ್ ತಮ್ಮ ಸಿಎಂ ಆಸೆಗೆ ಡಿ.ಕೆ.ಶಿವಕುಮಾರ್ ತಣ್ಣೀರೆರಚಿದರೆ ಏನು ಮಾಡುವುದು ಎಂಬ ಚಿಂತೆ, ಕಾಂಗ್ರೆಸ್ ನಾಯಕರೆಲ್ಲರೂ ತಮ್ಮ ಸ್ವಾರ್ಥದ ರಾಜಕಾರಣದ ಬಗ್ಗೆ ಚಿಂತಿಸುತ್ತಿದ್ದಾರೆ ಹೊರತು ಯಾರಿಗೂ ರಾಜ್ಯದ ಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದು ಆರೋಪ ಮಾಡಿದೆ.

ಮತ್ತೊಂದು ಟ್ವೀಟ್‍ನಲ್ಲಿ 508 ಕೋಟಿಯ ಭರ್ಜರಿ ಲಂಚ ಪಡೆದು ಕಾಂಗ್ರೆಸ್ ಆಡಳಿತದ ಛತ್ತೀಸ್‍ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಿಕ್ಕಿಬಿದ್ದಿದ್ದಾರೆ. ಇದರಲ್ಲಿ ಕರ್ನಾಟಕದ ಪಾಲು ಎಷ್ಟು ಕಳುಹಿಸಲಾಗಿತ್ತು ಎಂಬುದನ್ನೂ ಕಾಂಗ್ರೆಸ್ ಉತ್ತರಿಸಬೇಕು ಎಂದು ಒತ್ತಾಯಿಸಿದೆ.

ತೆಲಂಗಾಣದಲ್ಲೂ ಚುನಾವಣೆ ಘೋಷಣೆಯ ಬಳಿಕ ಡಿ.ಕೆ.ಶಿವಕುಮಾರ್ ಆಪ್ತರ ಮನೆಯಲ್ಲೂ ಸೇರಿ ಈಗಾಗಲೇ 40 ಕೋಟಿಗೂ ಅಕ ಜಪ್ತಿ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ ಗುತ್ತಿಗೆದಾರರು ಮತ್ತು ಬಿಲ್ಡರ್‌ಗಳ ಬಳಿ ಬಚ್ಚಿಟ್ಟಿದ್ದ ನೂರು ಕೋಟಿಗೂ ಅಧಿಕ, ಜತೆಗೆ ಪಂಚರಾಜ್ಯಗಳಿಗೆ ಕಾಂಗ್ರೆಸ್ ಇನ್ನೆಷ್ಟು ಕಳಿಸಿದೆ ಎಂಬುದನ್ನು ಸಿಎಂ ಮತ್ತು ಮುಖ್ಯಮಂತ್ರಿಯಾಗುವ ಅಭಿಲಾಷೆಯಲ್ಲಿರುವ ಎಲ್ಲರೂ ಮೊದಲು ಉತ್ತರಿಸಬೇಕು ಎಂದು ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸವಾಲು ಹಾಕಿದೆ.

andolanait

Recent Posts

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

27 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

1 hour ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

4 hours ago