ಮೈಸೂರು : ವ್ಯಂಗ್ಯಭರಿತವಾಗಿ ಟೀಕೆ ಮಾಡಿರುವ ಬಿಜೆಪಿ ರಾಜ್ಯದಲ್ಲಿ ಜ್ವಲಂತ ಸಮಸ್ಯೆಗಳಿದ್ದರೂ ಸಹ ಹಲವರು ತಮ್ಮದೇ ಆದ ಚಿಂತೆಯಲ್ಲಿ ಮುಳುಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯ ಕಾಂಗ್ರೆಸ್ ನಾಯಕರು ಪ್ರಸ್ತುತ ಈ ಕೆಳಗಿನ ಚಿಂತೆಗಳಲ್ಲಿ ಮುಳುಗಿದ್ದಾರೆ. ಸಿಎಂ ಸಿದ್ದರಾಮಯ್ಯ – ಸಿಎಂ ಕುರ್ಚಿಯನ್ನು ಉಳಿಸಿಕೊಳ್ಳುವ ಚಿಂತೆ, ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಇಳಿಸುವುದು ಹೇಗೆ ಎಂಬ ಚಿಂತೆ ಎಂದು ವ್ಯಂಗ್ಯವಾಡಿದೆ.
ಪ್ರಿಯಾಂಕ್ ಖರ್ಗೆ – ಸಿದ್ದರಾಮಯ್ಯರವರ ಕೆ.ಇ.ಎ. ಪರೀಕ್ಷಾ ಅಕ್ರಮವನ್ನು ಸಿಬಿಐಗೆ ವಹಿಸಿದರೆ ಏನು ಮಾಡುವುದೆಂಬ ಚಿಂತೆ, ಡಾ.ಪರಮೇಶ್ವರ್ ತಮ್ಮ ಸಿಎಂ ಆಸೆಗೆ ಡಿ.ಕೆ.ಶಿವಕುಮಾರ್ ತಣ್ಣೀರೆರಚಿದರೆ ಏನು ಮಾಡುವುದು ಎಂಬ ಚಿಂತೆ, ಕಾಂಗ್ರೆಸ್ ನಾಯಕರೆಲ್ಲರೂ ತಮ್ಮ ಸ್ವಾರ್ಥದ ರಾಜಕಾರಣದ ಬಗ್ಗೆ ಚಿಂತಿಸುತ್ತಿದ್ದಾರೆ ಹೊರತು ಯಾರಿಗೂ ರಾಜ್ಯದ ಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದು ಆರೋಪ ಮಾಡಿದೆ.
ಮತ್ತೊಂದು ಟ್ವೀಟ್ನಲ್ಲಿ 508 ಕೋಟಿಯ ಭರ್ಜರಿ ಲಂಚ ಪಡೆದು ಕಾಂಗ್ರೆಸ್ ಆಡಳಿತದ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಿಕ್ಕಿಬಿದ್ದಿದ್ದಾರೆ. ಇದರಲ್ಲಿ ಕರ್ನಾಟಕದ ಪಾಲು ಎಷ್ಟು ಕಳುಹಿಸಲಾಗಿತ್ತು ಎಂಬುದನ್ನೂ ಕಾಂಗ್ರೆಸ್ ಉತ್ತರಿಸಬೇಕು ಎಂದು ಒತ್ತಾಯಿಸಿದೆ.
ತೆಲಂಗಾಣದಲ್ಲೂ ಚುನಾವಣೆ ಘೋಷಣೆಯ ಬಳಿಕ ಡಿ.ಕೆ.ಶಿವಕುಮಾರ್ ಆಪ್ತರ ಮನೆಯಲ್ಲೂ ಸೇರಿ ಈಗಾಗಲೇ 40 ಕೋಟಿಗೂ ಅಕ ಜಪ್ತಿ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ ಗುತ್ತಿಗೆದಾರರು ಮತ್ತು ಬಿಲ್ಡರ್ಗಳ ಬಳಿ ಬಚ್ಚಿಟ್ಟಿದ್ದ ನೂರು ಕೋಟಿಗೂ ಅಧಿಕ, ಜತೆಗೆ ಪಂಚರಾಜ್ಯಗಳಿಗೆ ಕಾಂಗ್ರೆಸ್ ಇನ್ನೆಷ್ಟು ಕಳಿಸಿದೆ ಎಂಬುದನ್ನು ಸಿಎಂ ಮತ್ತು ಮುಖ್ಯಮಂತ್ರಿಯಾಗುವ ಅಭಿಲಾಷೆಯಲ್ಲಿರುವ ಎಲ್ಲರೂ ಮೊದಲು ಉತ್ತರಿಸಬೇಕು ಎಂದು ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸವಾಲು ಹಾಕಿದೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…