ಮೈಸೂರು : ವ್ಯಂಗ್ಯಭರಿತವಾಗಿ ಟೀಕೆ ಮಾಡಿರುವ ಬಿಜೆಪಿ ರಾಜ್ಯದಲ್ಲಿ ಜ್ವಲಂತ ಸಮಸ್ಯೆಗಳಿದ್ದರೂ ಸಹ ಹಲವರು ತಮ್ಮದೇ ಆದ ಚಿಂತೆಯಲ್ಲಿ ಮುಳುಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯ ಕಾಂಗ್ರೆಸ್ ನಾಯಕರು ಪ್ರಸ್ತುತ ಈ ಕೆಳಗಿನ ಚಿಂತೆಗಳಲ್ಲಿ ಮುಳುಗಿದ್ದಾರೆ. ಸಿಎಂ ಸಿದ್ದರಾಮಯ್ಯ – ಸಿಎಂ ಕುರ್ಚಿಯನ್ನು ಉಳಿಸಿಕೊಳ್ಳುವ ಚಿಂತೆ, ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಇಳಿಸುವುದು ಹೇಗೆ ಎಂಬ ಚಿಂತೆ ಎಂದು ವ್ಯಂಗ್ಯವಾಡಿದೆ.
ಪ್ರಿಯಾಂಕ್ ಖರ್ಗೆ – ಸಿದ್ದರಾಮಯ್ಯರವರ ಕೆ.ಇ.ಎ. ಪರೀಕ್ಷಾ ಅಕ್ರಮವನ್ನು ಸಿಬಿಐಗೆ ವಹಿಸಿದರೆ ಏನು ಮಾಡುವುದೆಂಬ ಚಿಂತೆ, ಡಾ.ಪರಮೇಶ್ವರ್ ತಮ್ಮ ಸಿಎಂ ಆಸೆಗೆ ಡಿ.ಕೆ.ಶಿವಕುಮಾರ್ ತಣ್ಣೀರೆರಚಿದರೆ ಏನು ಮಾಡುವುದು ಎಂಬ ಚಿಂತೆ, ಕಾಂಗ್ರೆಸ್ ನಾಯಕರೆಲ್ಲರೂ ತಮ್ಮ ಸ್ವಾರ್ಥದ ರಾಜಕಾರಣದ ಬಗ್ಗೆ ಚಿಂತಿಸುತ್ತಿದ್ದಾರೆ ಹೊರತು ಯಾರಿಗೂ ರಾಜ್ಯದ ಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದು ಆರೋಪ ಮಾಡಿದೆ.
ಮತ್ತೊಂದು ಟ್ವೀಟ್ನಲ್ಲಿ 508 ಕೋಟಿಯ ಭರ್ಜರಿ ಲಂಚ ಪಡೆದು ಕಾಂಗ್ರೆಸ್ ಆಡಳಿತದ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಿಕ್ಕಿಬಿದ್ದಿದ್ದಾರೆ. ಇದರಲ್ಲಿ ಕರ್ನಾಟಕದ ಪಾಲು ಎಷ್ಟು ಕಳುಹಿಸಲಾಗಿತ್ತು ಎಂಬುದನ್ನೂ ಕಾಂಗ್ರೆಸ್ ಉತ್ತರಿಸಬೇಕು ಎಂದು ಒತ್ತಾಯಿಸಿದೆ.
ತೆಲಂಗಾಣದಲ್ಲೂ ಚುನಾವಣೆ ಘೋಷಣೆಯ ಬಳಿಕ ಡಿ.ಕೆ.ಶಿವಕುಮಾರ್ ಆಪ್ತರ ಮನೆಯಲ್ಲೂ ಸೇರಿ ಈಗಾಗಲೇ 40 ಕೋಟಿಗೂ ಅಕ ಜಪ್ತಿ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ ಗುತ್ತಿಗೆದಾರರು ಮತ್ತು ಬಿಲ್ಡರ್ಗಳ ಬಳಿ ಬಚ್ಚಿಟ್ಟಿದ್ದ ನೂರು ಕೋಟಿಗೂ ಅಧಿಕ, ಜತೆಗೆ ಪಂಚರಾಜ್ಯಗಳಿಗೆ ಕಾಂಗ್ರೆಸ್ ಇನ್ನೆಷ್ಟು ಕಳಿಸಿದೆ ಎಂಬುದನ್ನು ಸಿಎಂ ಮತ್ತು ಮುಖ್ಯಮಂತ್ರಿಯಾಗುವ ಅಭಿಲಾಷೆಯಲ್ಲಿರುವ ಎಲ್ಲರೂ ಮೊದಲು ಉತ್ತರಿಸಬೇಕು ಎಂದು ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸವಾಲು ಹಾಕಿದೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…