ಮೈಸೂರು : ವ್ಯಂಗ್ಯಭರಿತವಾಗಿ ಟೀಕೆ ಮಾಡಿರುವ ಬಿಜೆಪಿ ರಾಜ್ಯದಲ್ಲಿ ಜ್ವಲಂತ ಸಮಸ್ಯೆಗಳಿದ್ದರೂ ಸಹ ಹಲವರು ತಮ್ಮದೇ ಆದ ಚಿಂತೆಯಲ್ಲಿ ಮುಳುಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯ ಕಾಂಗ್ರೆಸ್ ನಾಯಕರು ಪ್ರಸ್ತುತ ಈ ಕೆಳಗಿನ ಚಿಂತೆಗಳಲ್ಲಿ ಮುಳುಗಿದ್ದಾರೆ. ಸಿಎಂ ಸಿದ್ದರಾಮಯ್ಯ – ಸಿಎಂ ಕುರ್ಚಿಯನ್ನು ಉಳಿಸಿಕೊಳ್ಳುವ ಚಿಂತೆ, ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಇಳಿಸುವುದು ಹೇಗೆ ಎಂಬ ಚಿಂತೆ ಎಂದು ವ್ಯಂಗ್ಯವಾಡಿದೆ.
ಪ್ರಿಯಾಂಕ್ ಖರ್ಗೆ – ಸಿದ್ದರಾಮಯ್ಯರವರ ಕೆ.ಇ.ಎ. ಪರೀಕ್ಷಾ ಅಕ್ರಮವನ್ನು ಸಿಬಿಐಗೆ ವಹಿಸಿದರೆ ಏನು ಮಾಡುವುದೆಂಬ ಚಿಂತೆ, ಡಾ.ಪರಮೇಶ್ವರ್ ತಮ್ಮ ಸಿಎಂ ಆಸೆಗೆ ಡಿ.ಕೆ.ಶಿವಕುಮಾರ್ ತಣ್ಣೀರೆರಚಿದರೆ ಏನು ಮಾಡುವುದು ಎಂಬ ಚಿಂತೆ, ಕಾಂಗ್ರೆಸ್ ನಾಯಕರೆಲ್ಲರೂ ತಮ್ಮ ಸ್ವಾರ್ಥದ ರಾಜಕಾರಣದ ಬಗ್ಗೆ ಚಿಂತಿಸುತ್ತಿದ್ದಾರೆ ಹೊರತು ಯಾರಿಗೂ ರಾಜ್ಯದ ಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದು ಆರೋಪ ಮಾಡಿದೆ.
ಮತ್ತೊಂದು ಟ್ವೀಟ್ನಲ್ಲಿ 508 ಕೋಟಿಯ ಭರ್ಜರಿ ಲಂಚ ಪಡೆದು ಕಾಂಗ್ರೆಸ್ ಆಡಳಿತದ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಿಕ್ಕಿಬಿದ್ದಿದ್ದಾರೆ. ಇದರಲ್ಲಿ ಕರ್ನಾಟಕದ ಪಾಲು ಎಷ್ಟು ಕಳುಹಿಸಲಾಗಿತ್ತು ಎಂಬುದನ್ನೂ ಕಾಂಗ್ರೆಸ್ ಉತ್ತರಿಸಬೇಕು ಎಂದು ಒತ್ತಾಯಿಸಿದೆ.
ತೆಲಂಗಾಣದಲ್ಲೂ ಚುನಾವಣೆ ಘೋಷಣೆಯ ಬಳಿಕ ಡಿ.ಕೆ.ಶಿವಕುಮಾರ್ ಆಪ್ತರ ಮನೆಯಲ್ಲೂ ಸೇರಿ ಈಗಾಗಲೇ 40 ಕೋಟಿಗೂ ಅಕ ಜಪ್ತಿ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ ಗುತ್ತಿಗೆದಾರರು ಮತ್ತು ಬಿಲ್ಡರ್ಗಳ ಬಳಿ ಬಚ್ಚಿಟ್ಟಿದ್ದ ನೂರು ಕೋಟಿಗೂ ಅಧಿಕ, ಜತೆಗೆ ಪಂಚರಾಜ್ಯಗಳಿಗೆ ಕಾಂಗ್ರೆಸ್ ಇನ್ನೆಷ್ಟು ಕಳಿಸಿದೆ ಎಂಬುದನ್ನು ಸಿಎಂ ಮತ್ತು ಮುಖ್ಯಮಂತ್ರಿಯಾಗುವ ಅಭಿಲಾಷೆಯಲ್ಲಿರುವ ಎಲ್ಲರೂ ಮೊದಲು ಉತ್ತರಿಸಬೇಕು ಎಂದು ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸವಾಲು ಹಾಕಿದೆ.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…