ಮೈಸೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯವು ಘಟಿಕೋತ್ಸವ ಭವನದಲ್ಲಿ ಇಂದು ( ಮಾರ್ಚ್ 24 ) ಆಯೋಜಿಸಿದ್ದ ಅನೌಪಚಾರಿಕ ಸಂವಾದದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿ ಕೇಂದ್ರ ಸರ್ಕಾರದ ವಿರುದ್ಧದ ಅನುದಾನ ಹಂಚಿಕೆ ತಾರತಮ್ಯದ ಆರೋಪ ನಿರಾಧಾರ, ಈ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿಕೆ ನೀಡಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಮೂಲಕ ಸಿದ್ದರಾಮಯ್ಯನವರ ಆರೋಪವನ್ನು ನಿರ್ಮಲಾ ಸೀತಾರಾಮನ್ ತಳ್ಳಿಹಾಕಿದರು. ಮೈಸೂರಿನಲ್ಲಿ ಮಾತ್ರವಲ್ಲದೇ ಬೆಂಗಳೂರಿನಲ್ಲಿ ಚಿಂತಕರ ವೇದಿಕೆ ಆಯೋಜಿಸಿದ್ದ ಅನೌಪಚಾರಿಕ ಸಂವಾದದಲ್ಲಿಯೂ ಸಹ ನಿರ್ಮಲಾ ಸೀತಾರಾಮನ್ ಈ ಕುರಿತು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕಕ್ಕೆ 5495 ಕೋಟಿ ರೂ ವಿಶೇಷ ಅನುದಾನ ಬಿಡುಗಡೆ ಮಾಡಿಲ್ಲ ಎಂಬ ಹೇಳಿಕೆ ಸಂಪೂರ್ಣ ಸುಳ್ಳು, ಹಣಕಾಸು ವರದಿಯಲ್ಲಿ ಅಂತಹ ಯಾವುದೇ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ. ಕರ್ನಾಟಕಕ್ಕೆ ಪ್ರತಿ ಪೈಸೆಯನ್ನು ಲೆಕ್ಕ ಹಾಕಲಾಗಿದೆ ಹಾಗೂ ಬಿಡುಗಡೆಯನ್ನೂ ಸಹ ಮಾಡಲಾಗಿದೆ ಎಂದು ಹೇಳಿಕೆ ನೀಡಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…