ಮೈಸೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯವು ಘಟಿಕೋತ್ಸವ ಭವನದಲ್ಲಿ ಇಂದು ( ಮಾರ್ಚ್ 24 ) ಆಯೋಜಿಸಿದ್ದ ಅನೌಪಚಾರಿಕ ಸಂವಾದದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿ ಕೇಂದ್ರ ಸರ್ಕಾರದ ವಿರುದ್ಧದ ಅನುದಾನ ಹಂಚಿಕೆ ತಾರತಮ್ಯದ ಆರೋಪ ನಿರಾಧಾರ, ಈ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿಕೆ ನೀಡಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಮೂಲಕ ಸಿದ್ದರಾಮಯ್ಯನವರ ಆರೋಪವನ್ನು ನಿರ್ಮಲಾ ಸೀತಾರಾಮನ್ ತಳ್ಳಿಹಾಕಿದರು. ಮೈಸೂರಿನಲ್ಲಿ ಮಾತ್ರವಲ್ಲದೇ ಬೆಂಗಳೂರಿನಲ್ಲಿ ಚಿಂತಕರ ವೇದಿಕೆ ಆಯೋಜಿಸಿದ್ದ ಅನೌಪಚಾರಿಕ ಸಂವಾದದಲ್ಲಿಯೂ ಸಹ ನಿರ್ಮಲಾ ಸೀತಾರಾಮನ್ ಈ ಕುರಿತು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕಕ್ಕೆ 5495 ಕೋಟಿ ರೂ ವಿಶೇಷ ಅನುದಾನ ಬಿಡುಗಡೆ ಮಾಡಿಲ್ಲ ಎಂಬ ಹೇಳಿಕೆ ಸಂಪೂರ್ಣ ಸುಳ್ಳು, ಹಣಕಾಸು ವರದಿಯಲ್ಲಿ ಅಂತಹ ಯಾವುದೇ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ. ಕರ್ನಾಟಕಕ್ಕೆ ಪ್ರತಿ ಪೈಸೆಯನ್ನು ಲೆಕ್ಕ ಹಾಕಲಾಗಿದೆ ಹಾಗೂ ಬಿಡುಗಡೆಯನ್ನೂ ಸಹ ಮಾಡಲಾಗಿದೆ ಎಂದು ಹೇಳಿಕೆ ನೀಡಿದರು.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…