ರಾಜ್ಯ

ಬೆಂಗಳೂರಿನಲ್ಲಿ ಪ್ರತಿ ಗಂಟೆಗೂ ಇಬ್ಬರಲ್ಲಿ ಡೆಂಗ್ಯೂ ಪತ್ತೆ

ಬೆಂಗಳೂರು : ದಿನದಿಂದ ದಿನಕ್ಕೆ ಡೆಂಗ್ಯೂ ರಣಕೇಕೆ ಮುಂದುವರೆಯುತ್ತಿದ್ದು, ಬೆಂಗಳೂರು ಮಾತ್ರವಲ್ಲದೆ ಇತರೆ ಜಿಲ್ಲೆಗಳಲ್ಲಿಯೂ ಈ ವರ್ಷ ಡೆಂಗ್ಯೂ ಹಾವಾಳಿ ಹೆಚ್ಚಾಗುತ್ತಿದೆ. ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಕೇಸ್‌ ಗೆ ಕ್ರಮ ಕೈಗೊಳ್ಳಬೇಕಾದ ಪಾಲಿಕೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಸ್ಟಿಂಗ್‌ ಕಿಟ್‌ ಕೊರತ ಎದುರಾಗಿದೆ. ಸದ್ಯ ಇದೇ ವಿಚಾರ ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ.

ಈ ಮಧ್ಯೆ ಬೆಂಗಳೂರಿನಲ್ಲಿ ಪ್ರತಿ ೨ ಗಂಟೆಗೆ ಇಬ್ಬರಲ್ಲಿ ಡೆಂಗ್ಯೂ ಲಕ್ಷಣಗಳು ಪತ್ತೆಯಾಗುತ್ತಿವೆ. ಕಳೆದ ೬ ತಿಂಗಳಲ್ಲಿ ೬೯೦೦ಕ್ಕೂ ಹೆಚ್ಚು ಜನ ಡೆಂಗ್ಯೂ ಟೆಸ್ಟ್‌ ಗೆ ಒಳಗಾಗಿದ್ದಾರೆ. ಈ ಪೈಕಿ ೨೪೫೭ ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ.

ಬೆಂಗಳೂರು ಪೂರ್ವ ವಲಯದಲ್ಲಿ ಓರ್ವ ವೃದ್ಧ, ಓರ್ವ ಯುವಕನನ್ನ ಡೆಂಗ್ಯೂ ಬಲಿ ಪಡೆದಿದ್ದು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಆತಂಕವನ್ನುಂಟು ಮಾಡಿದೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…

8 mins ago

ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…

12 mins ago

ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ

ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…

19 mins ago

ಹನೂರು: ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿಸಲಗ ದಾಂಧಲೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…

1 hour ago

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…

2 hours ago

ಹಾಸನ: ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಕಾರು

ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…

3 hours ago