ಅರಣ್ಯ ಹುತಾತ್ಮರಿಗೆ ನಮನ ಸಲ್ಲಿಸಿದ ಸಿಎಂ
ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು: ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿನ ಹುತತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ರಾಜ್ಯದಲ್ಲಿ ಅನುಪಾತಕ್ಕೆ ತಕ್ಕಷ್ಟು ಅರಣ್ಯವಿಲ್ಲ. ಆದ್ದರಿಂದ ಅರಣ್ಯೀಕರಣ ಹೆಚ್ಚಾಗಬೇಕು. ಕಾಡು ಮತ್ತು ವನ್ಯ ಪ್ರಾಣಿ ಸಂಪತ್ತಿನ ರಕ್ಷಣೆ ಕೇವಲ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ ಎಂದರೆ ನಾವು ನಮ್ಮ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಂತಾಗುತ್ತದೆ ಎಂದರು.
ರಾಜ್ಯದಲ್ಲಿ ಆನೆ, ಹುಲಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಂತೋಷದ ಸಂಗತಿ. ಆದರೆ ಪ್ರಾಣಿ-ಮನುಷ್ಯ ಸಂಘರ್ಷ ತಪ್ಪಿಸಿ ಮಾನವ, ಪ್ರಾಣಿ ಸಂಪತ್ತನ್ನು ಕಾಪಾಡುವ ದಿಕ್ಕಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕೆಲಸಗಳು ಆಗಬೇಕಿದೆ. ಇದಕ್ಕಾಗಿ ಲಭ್ಯ ಇರುವ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.
ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷಕ್ಕೆ ಹೆಚ್ಚಿಸಲಾಗಿದೆ.
ಅರಣ್ಯ ಹುತಾತ್ಮರು ಮನುಕುಲದ ಸಂರಕ್ಷಕರು. ಇವರ ತ್ಯಾಗ ಅರಣ್ಯ ಸಂರಕ್ಷಣೆಗೆ ಸ್ಫೂರ್ಥಿಯಾಗಲಿ ಎಂದು ಹಾರೈಸಿದರು.
ಅರಣ್ಯ ಮತ್ತು ಜೀವಶಾಸ್ತ್ರ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಹುತಾತ್ಮರ ಕುಟುಂಬದ ಸದಸ್ಯರು ಮತ್ತು ಬಂಧುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…