ಬೆಳಗಾವಿ: ಬಿಜೆಪಿ ಪಕ್ಷದ ಈಗಿನ ಸ್ಥಿತಿ ನೋಡಿದ್ರೆ ದುಃಖ ಆಗುತ್ತೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾನೇ ಕಟ್ಟಿ ಬೆಳೆಸಿದ್ದೇನೆ ಎಂಬ ಅಹಂಕಾರ ನನ್ನಲ್ಲಿ ಇಲ್ಲ. ನನ್ನಂತೆ ಸಾಕಷ್ಟು ಹಿರಿಯರು ತಪಸ್ಸು ಮಾಡಿ ಬಿಜೆಪಿ ಪಕ್ಷ ಕಟ್ಟಿದ್ದಾರೆ. ಈಗಿನ ಪರಿಸ್ಥಿತಿ ನೋಡಿದ್ರೆ ಅವರಿಗೆಲ್ಲ ಬೇಸರ ಇದೆ. ನೋವು ಕೂಡ ಇದೆ. ಆ ನೋವು ಯಾರ ಹತ್ತಿರ ಹೇಳಿಕೊಳ್ಳಬೇಕು ಎಂಬ ಗೊಂದಲ ಇದೆ. ಬಿಜೆಪಿ ನನ್ನ ತಾಯಿ, ಮೊದಲಿನಂತೆ ಪಕ್ಷದ ಸಿದ್ಧಾಂತದ ಪ್ರಕಾರ ಎಲ್ಲವೂ ಸರಿ ನಡೆದರೆ ಪಕ್ಷಕ್ಕೆ ಬರುವೆ ಎಂದರು.
ಇನ್ನು ಬಿಜೆಪಿ ಮನೆಯೊಂದು ಆರು ಬಾಗಿಲು ಎಂಬ ಎಂಬ ಕಾಂಗ್ರೆಸ್ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ಒಂದೇ ಇದೆ. ಅದೇ ಕಾಂಗ್ರೆಸ್ ಎಷ್ಟು ಇದೆ ಎಂದರೆ ನೂರಾರು ಇದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಒಂದೇ ಬಾಗಿಲು ಇದೆಯಾ? ಅವರ ಪಕ್ಷದ ಬಾಗಿಲುಗಳನ್ನು ಲೆಕ್ಕ ಹಾಕಲಿ ಎಂದು ತಿರುಗೇಟು ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ತಂದೆ-ಮಕ್ಕಳ ಪಕ್ಷ ಆಗಿದೆ. ಇದನ್ನು ನಾನು ಮೊದಲಿನಿಂದಲೂ ಹೇಳುತ್ತಿದ್ದೇನೆ. ಅದು ಪಕ್ಷದ ಆಂತರಿಕ ವಿಚಾರ ಅವರೇ ತೀರ್ಮಾನ ಮಾಡಲಿ ಎಂದು ಹೇಳಿದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…