ತುಮಕೂರು: ಇತ್ತೀಚಿಗೆ ಗ್ಯಾರಂಟಿಯಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡುವ ಮೂಲಕ ವಿವಾದ್ಮಾತಕ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ಇದೀಗ ಅಂತದ್ದೆ ಎಡವಟ್ಟು ಮಾಡಿಕೊಂಡಿದ್ದಾರೆ.
ಹೌದು. ಇಂದು(ಏ.20) ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಳ ಮಹಿಳೆಯರು ಮನೆಯ ಪುರುಷರು ಕುಡುಕರು ಎಂದು ಹೇಳುವ ಮೂಲಕ ಮತ್ತೊಮ್ಮೆ ವಿವಾದ ಮಾಡಿಕೊಂಡಿದ್ದಾರೆ.
ಗ್ಯಾರಂಟಿ ಯೋಜನೆಯಲ್ಲಿ ಗೃಹಲಕ್ಷ್ಮಿ 2000 ಹಣ ನಿಮಗೆ ಬರುತ್ತಿದೆ. ಆದರೆ ನಿಮ್ಮ ಕುಟುಂಬದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ದುಡಿದು ಬರುವ ಯಾಜಮಾನರು ಇತ್ತೀಚೆಗೆ 100ಕ್ಕೆ 80ರಿಂದ 90 ಭಾಗ ಕುಡಿಯುವುದಕ್ಕೆ(ಮದ್ಯ ಸೇವನೆ) ಬಳಸುತ್ತಿದ್ದಾರೆ. ಹಿಂದೆ ಸಂಜೆ ಸ್ನೇಹಿತರ ಜೊತೆ ಹೋದ್ರೆ 25 ರೂಪಾಯಿನಲ್ಲಿ ಮುಗಿಸಿಕೊಂಡು ಬರುತ್ತಿದ್ದರು. ಈಗ ಸಣ್ಣ ಬಾಟಲ್ ಗೆ 250, 300 ರೂ. ಕೊಡಬೇಕು. ಅಂದರೆ ತಿಂಗಳಿಗೆ ಐದಾರು ಸಾವಿರ ರೂ. ಆಗುತ್ತದೆ. ಅಂದರೆ ನಿಮ್ಮಿಂದ ವಸೂಲಿ ಮಾಡ್ತಾ ಇದ್ದಾರೆ ಅಂತಾ ನಾನು ಹೇಳ್ತಿಲ್ಲ. ಇದು ಪಿಕ್ ಪಾಕೆಟ್ ಸರಕಾರ, ನಿಮ್ಮ ಜೇಬಿನಿಂದ ಪಿಕ್ ಪಾಕೆಟ್ ಮಾಡ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್ಪೋಸ್ಟ್ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…
ವಾಷಿಂಗ್ಟನ್: ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್,…
ವಾಷಿಂಗ್ಟನ್: ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ದೇಶವನ್ನು…