ತುಮಕೂರು: ಇತ್ತೀಚಿಗೆ ಗ್ಯಾರಂಟಿಯಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡುವ ಮೂಲಕ ವಿವಾದ್ಮಾತಕ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ಇದೀಗ ಅಂತದ್ದೆ ಎಡವಟ್ಟು ಮಾಡಿಕೊಂಡಿದ್ದಾರೆ.
ಹೌದು. ಇಂದು(ಏ.20) ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಳ ಮಹಿಳೆಯರು ಮನೆಯ ಪುರುಷರು ಕುಡುಕರು ಎಂದು ಹೇಳುವ ಮೂಲಕ ಮತ್ತೊಮ್ಮೆ ವಿವಾದ ಮಾಡಿಕೊಂಡಿದ್ದಾರೆ.
ಗ್ಯಾರಂಟಿ ಯೋಜನೆಯಲ್ಲಿ ಗೃಹಲಕ್ಷ್ಮಿ 2000 ಹಣ ನಿಮಗೆ ಬರುತ್ತಿದೆ. ಆದರೆ ನಿಮ್ಮ ಕುಟುಂಬದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ದುಡಿದು ಬರುವ ಯಾಜಮಾನರು ಇತ್ತೀಚೆಗೆ 100ಕ್ಕೆ 80ರಿಂದ 90 ಭಾಗ ಕುಡಿಯುವುದಕ್ಕೆ(ಮದ್ಯ ಸೇವನೆ) ಬಳಸುತ್ತಿದ್ದಾರೆ. ಹಿಂದೆ ಸಂಜೆ ಸ್ನೇಹಿತರ ಜೊತೆ ಹೋದ್ರೆ 25 ರೂಪಾಯಿನಲ್ಲಿ ಮುಗಿಸಿಕೊಂಡು ಬರುತ್ತಿದ್ದರು. ಈಗ ಸಣ್ಣ ಬಾಟಲ್ ಗೆ 250, 300 ರೂ. ಕೊಡಬೇಕು. ಅಂದರೆ ತಿಂಗಳಿಗೆ ಐದಾರು ಸಾವಿರ ರೂ. ಆಗುತ್ತದೆ. ಅಂದರೆ ನಿಮ್ಮಿಂದ ವಸೂಲಿ ಮಾಡ್ತಾ ಇದ್ದಾರೆ ಅಂತಾ ನಾನು ಹೇಳ್ತಿಲ್ಲ. ಇದು ಪಿಕ್ ಪಾಕೆಟ್ ಸರಕಾರ, ನಿಮ್ಮ ಜೇಬಿನಿಂದ ಪಿಕ್ ಪಾಕೆಟ್ ಮಾಡ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…