ಬೆಂಗಳೂರು: ನಾಳೆ, ನಾಡಿದ್ದು PDO ಹುದ್ದೆಗಳಿಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ ಗ್ರಾಮೀಣಾಭಿವೃದ್ಧಿ ತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿದ ಮೂಲ ವೃಂದದ-150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ ಸಲುವಾಗಿ ನಾಳೆ ಮಧ್ಯಾಹ್ನ 2 ರಿಂದ 4ರವರೆಗೆ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುವುದು.
ಡಿಸೆಂಬರ್.8ರಂದು ಬೆಳಿಗ್ಗೆ 10 ರಿಂದ 11.30 ಜಿ.ಕೆ ಹಾಗೂ ಮಧ್ಯಾಹ್ನ 2ರಿಂದ 4ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುವುದು.
ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಳತೆಯಲ್ಲಿ ಐದು ಮತ್ತು ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿದೆ. ಟೈಪಿಂಗ್, ಜೆರಾಕ್ಸ್ ಮತ್ತು ಫ್ಯಾಕ್ಸ್ ಅಂಗಡಿಗಳು ಪರೀಕ್ಷಾ ಅವಧಿಯಲ್ಲಿ ಪ್ರತಿಬಂಧಿಸಿವೆ. ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ/ ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…