ಯಾದಗಿರಿ/ಕಲಬುರಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಯನ್ನು ಚುರುಕುಗೊಳಿಸಿರುವ ರಾಜ್ಯ ಪೊಲೀಸರು ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಿ 22 ಜನರನ್ನು ವಶಕ್ಕೆ ಪಡೆದಿದ್ದಾರೆ.
ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ನಕಲು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲೆಯಲ್ಲಿ 5 ಪ್ರಕರಣಗಳನ್ನು ದಾಖಲಾಗಿದ್ದು, 9 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ, ವಿಚಾರಣೆ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ತಿಳಿಸಿದ್ದಾರೆ.
ಕಲಬುರಗಿ ನಗರ ವ್ಯಾಪ್ತಿಯಲ್ಲಿ 2 ಪ್ರಕರಣ ದಾಖಲಾಗಿದ್ದು, 5 ಜನರನ್ನು ವಶಕ್ಕೆ ಪಡೆಯಲಾಗಿದೆ ಮತ್ತು ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಈ ಸಂಜೆಗೆ ತಿಳಿಸಿದ್ದಾರೆ. ಶನಿವಾರ ನಡೆದ ಪರೀಕ್ಷಾ ಕೇಂದ್ರಗಳಲ್ಲಿ ಜಿಲ್ಲಾಡಳಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ಪರಿಶೀಲನೆ ಮಾಡುವ ಮೆಟಲ್ ಡಿಟೆಕ್ಟರ್ ಬಳಕೆ ಮಾಡಲಿಲ್ಲ, ಪರಿಣಾಮ ಅಕ್ರಮಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಈ ಅಕ್ರಮದ ಪ್ರಮುಖ ಆರೋಪಿ ಪುಟ್ಟು ಎಂದು ಹೇಳಲಾಗುತ್ತಿದ್ದು, ಈತನ ಜೊತೆ ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಸೊನ್ನ ಗ್ರಾಮದ ಒಬ್ಬ ಸಾಥ್ ನೀಡಿದ್ದಾನೆ ಎಂದು ತಿಳಿದುಬಂದಿದೆ.
ಬ್ಲೂಟೂತ್ ಉಪಕರಣ ಬಳಕೆ, 9 ಜನ ಬಂಧನ:
ಈ ಹಿಂದೆ ರಾಜ್ಯದಲ್ಲಿ ನಡೆದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಮೊದಲು ಬೆಳಕಿಗೆ ಬಂದಿದ್ದೇ ಕಲಬುರಗಿಯಲ್ಲಿ. ಈ ಪ್ರಕರಣ ಮಾಸುವ ಮುನ್ನವೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಎಫ್ಡಿಎ ಹುದ್ದೆಗಳಿಗಾಗಿ ಶನಿವಾರ ನಡೆದ ಪ್ರವೇಶ ಪರೀಕ್ಷೆಯಲ್ಲಿ 3 ಕೇಂದ್ರಗಳಲ್ಲಿ ಅಭ್ಯರ್ಥಿಗಳು ಅತ್ಯಾಧುನಿಕ ಬ್ಲೂಟೂತ್ ಬಳಸಿ ಅಕ್ರಮ ನಡೆಸಿದ 22 ಜನರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…