ರಾಜ್ಯ

ಲಕ್ಕುಂಡಿಯಲ್ಲಿ ಮುಂದುವರಿದ ಉತ್ಖನನ : ಪ್ರಾಚ್ಯಾವಶೇಷಗಳು ಪತ್ತೆ

ಲಕ್ಕುಂಡಿ : ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಈಗಾಗಲೇ ಶಿವಲಿಂಗ ಮತ್ತು ಪಾಣಿಪೀಠದಂತಹ ಐತಿಹಾಸಿಕ ಕುರುಹುಗಳು ಪತ್ತೆಯಾಗಿವೆ.

ನಾಲ್ಕನೇ ದಿನದ ಶೋಧ ಕಾರ್ಯದಲ್ಲಿ ಮಣ್ಣಿನ ಪದರಗಳ ಅಡಿಯಲ್ಲಿ ವಿಶಿಷ್ಟ ಆಕೃತಿಯ ಕಲ್ಲಿನ ಆಯುಧ ದೊರೆತಿದ್ದು, ತಜ್ಞರ ಪರಿಶೀಲನೆಯ ನಂತರ ಇದು ಶಿಲಾಯುಗದ ಮಾನವರು ಬೇಟೆ ಅಥವಾ ರಕ್ಷಣಾ ಉದ್ದೇಶಕ್ಕಾಗಿ ಬಳಸುತ್ತಿದ್ದ ಕಲ್ಲಿನ ಕೊಡಲಿ ಎಂಬುದು ಸ್ಪಷ್ಟವಾಗಿದೆ.

ಶೋಧನಾ ಕಾರ್ಯದಲ್ಲಿ ಶಿಲಾಯುಗಕ್ಕೆ ಸೇರಿದ ಅತ್ಯಂತ ಪ್ರಾಚೀನ ಕಲ್ಲಿನ ಆಯುಧ ಪತ್ತೆಯಾಗಿರುವ ಬೆನ್ನಲ್ಲೇ, ಇದೀಗ ಉತ್ಖನನ ನಡೆಯುತ್ತಿರುವ ಸ್ಥಳದ ಪಕ್ಕದಲ್ಲಿರುವ ಕೋಟೆ ಗೋಡೆಯಲ್ಲಿ ಹುದುಗಿ ಹೋಗಿದ್ದ ಅಪಾರ ಪ್ರಮಾಣದ ಪ್ರಾಚ್ಯಾವಶೇಷಗಳು ಬೆಳಕಿಗೆ ಬಂದಿವೆ.

ಲಕ್ಕುಂಡಿಯ ಕಲಾತ್ಮಕ ಶ್ರೀಮಂತಿಕೆಯನ್ನು ಸಾರುವಂತೆ ಒಂದೊಂದು ಶಿಲೆಯೂ ಸುಂದರ ಶಿಲ್ಪಕಲೆಗಳನ್ನು ಹೊತ್ತಿದ್ದು, ಇತಿಹಾಸಾಸಕ್ತರು ಹಾಗೂ ಸಂಶೋಧಕರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾಗಿರುವ ಈ ಶಿಲೆಗಳು, ಪ್ರಾಚೀನ ದೇವಾಲಯಗಳಲ್ಲಿ ಬಳಸಲಾಗಿದ್ದ ಅಪೂರ್ವ ಕಲಾಕೃತಿಗಳನ್ನು ಪ್ರತಿಬಿಂಬಿಸುತ್ತಿವೆ ಎನ್ನಲಾಗಿದೆ.

ಈ ಅನ್ವೇಷಣೆ ರಾಜ್ಯದ ಜನರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದು, ಕಲೆಗಳ ಶ್ರೀಮಂತ ನಾಡು ಎಂಬ ಖ್ಯಾತಿಯನ್ನು ಲಕ್ಕುಂಡಿ ಮತ್ತೊಮ್ಮೆ ಸಾಬೀತುಪಡಿಸುತ್ತಿದೆ. ಚಿನ್ನದಲ್ಲಿ ಮಾತ್ರವಲ್ಲ, ಕಲೆಗಳಲ್ಲೂ ಅಪಾರ ಶ್ರೀಮಂತಿಕೆ ಹೊಂದಿರುವ ಈ ನೆಲದ ಮಹತ್ವವನ್ನು ಈ ಶಿಲ್ಪಕಲೆಗಳು ಸಾರುತ್ತಿವೆ.

ಈ ಅಮೂಲ್ಯ ವಸ್ತು ಪತ್ತೆಯಾದ ತಕ್ಷಣ, ಉತ್ಖನನ ಮೇಲ್ವಿಚಾರಕರು ಅದನ್ನು ಸೂಕ್ಷ್ಮವಾಗಿ ಪ್ಲಾಸ್ಟಿಕ್‌ ಬ್ಯಾಗ್‌ನಲ್ಲಿ ಮುಚ್ಚಿ, ಹಾನಿಯಾಗದಂತೆ ಸುರಕ್ಷಿತವಾಗಿ ಸಂರಕ್ಷಿಸಿದ್ದಾರೆ. ಆಯುಧದ ಮೇಲೆ ಶೋಧ ದಿನಾಂಕ ಮತ್ತು ವಿವರಗಳು ಟ್ಯಾಗ್‌ ಮೂಲಕ ಲೇಬಲ್‌ ಮಾಡಲಾಗಿದ್ದು, ಭವಿಷ್ಯದಲ್ಲಿ ಅದನ್ನು ಅಧ್ಯಯನ ಮತ್ತು ಪ್ರದರ್ಶನಕ್ಕಾಗಿ ಉಪಯೋಗಿಸಲು ಸಿದ್ಧಪಡಿಸಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

5 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

5 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

5 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

5 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

5 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

5 hours ago