ಲಕ್ಕುಂಡಿ : ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಈಗಾಗಲೇ ಶಿವಲಿಂಗ ಮತ್ತು ಪಾಣಿಪೀಠದಂತಹ ಐತಿಹಾಸಿಕ ಕುರುಹುಗಳು ಪತ್ತೆಯಾಗಿವೆ.
ನಾಲ್ಕನೇ ದಿನದ ಶೋಧ ಕಾರ್ಯದಲ್ಲಿ ಮಣ್ಣಿನ ಪದರಗಳ ಅಡಿಯಲ್ಲಿ ವಿಶಿಷ್ಟ ಆಕೃತಿಯ ಕಲ್ಲಿನ ಆಯುಧ ದೊರೆತಿದ್ದು, ತಜ್ಞರ ಪರಿಶೀಲನೆಯ ನಂತರ ಇದು ಶಿಲಾಯುಗದ ಮಾನವರು ಬೇಟೆ ಅಥವಾ ರಕ್ಷಣಾ ಉದ್ದೇಶಕ್ಕಾಗಿ ಬಳಸುತ್ತಿದ್ದ ಕಲ್ಲಿನ ಕೊಡಲಿ ಎಂಬುದು ಸ್ಪಷ್ಟವಾಗಿದೆ.
ಶೋಧನಾ ಕಾರ್ಯದಲ್ಲಿ ಶಿಲಾಯುಗಕ್ಕೆ ಸೇರಿದ ಅತ್ಯಂತ ಪ್ರಾಚೀನ ಕಲ್ಲಿನ ಆಯುಧ ಪತ್ತೆಯಾಗಿರುವ ಬೆನ್ನಲ್ಲೇ, ಇದೀಗ ಉತ್ಖನನ ನಡೆಯುತ್ತಿರುವ ಸ್ಥಳದ ಪಕ್ಕದಲ್ಲಿರುವ ಕೋಟೆ ಗೋಡೆಯಲ್ಲಿ ಹುದುಗಿ ಹೋಗಿದ್ದ ಅಪಾರ ಪ್ರಮಾಣದ ಪ್ರಾಚ್ಯಾವಶೇಷಗಳು ಬೆಳಕಿಗೆ ಬಂದಿವೆ.
ಲಕ್ಕುಂಡಿಯ ಕಲಾತ್ಮಕ ಶ್ರೀಮಂತಿಕೆಯನ್ನು ಸಾರುವಂತೆ ಒಂದೊಂದು ಶಿಲೆಯೂ ಸುಂದರ ಶಿಲ್ಪಕಲೆಗಳನ್ನು ಹೊತ್ತಿದ್ದು, ಇತಿಹಾಸಾಸಕ್ತರು ಹಾಗೂ ಸಂಶೋಧಕರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾಗಿರುವ ಈ ಶಿಲೆಗಳು, ಪ್ರಾಚೀನ ದೇವಾಲಯಗಳಲ್ಲಿ ಬಳಸಲಾಗಿದ್ದ ಅಪೂರ್ವ ಕಲಾಕೃತಿಗಳನ್ನು ಪ್ರತಿಬಿಂಬಿಸುತ್ತಿವೆ ಎನ್ನಲಾಗಿದೆ.
ಈ ಅನ್ವೇಷಣೆ ರಾಜ್ಯದ ಜನರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದು, ಕಲೆಗಳ ಶ್ರೀಮಂತ ನಾಡು ಎಂಬ ಖ್ಯಾತಿಯನ್ನು ಲಕ್ಕುಂಡಿ ಮತ್ತೊಮ್ಮೆ ಸಾಬೀತುಪಡಿಸುತ್ತಿದೆ. ಚಿನ್ನದಲ್ಲಿ ಮಾತ್ರವಲ್ಲ, ಕಲೆಗಳಲ್ಲೂ ಅಪಾರ ಶ್ರೀಮಂತಿಕೆ ಹೊಂದಿರುವ ಈ ನೆಲದ ಮಹತ್ವವನ್ನು ಈ ಶಿಲ್ಪಕಲೆಗಳು ಸಾರುತ್ತಿವೆ.
ಈ ಅಮೂಲ್ಯ ವಸ್ತು ಪತ್ತೆಯಾದ ತಕ್ಷಣ, ಉತ್ಖನನ ಮೇಲ್ವಿಚಾರಕರು ಅದನ್ನು ಸೂಕ್ಷ್ಮವಾಗಿ ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಮುಚ್ಚಿ, ಹಾನಿಯಾಗದಂತೆ ಸುರಕ್ಷಿತವಾಗಿ ಸಂರಕ್ಷಿಸಿದ್ದಾರೆ. ಆಯುಧದ ಮೇಲೆ ಶೋಧ ದಿನಾಂಕ ಮತ್ತು ವಿವರಗಳು ಟ್ಯಾಗ್ ಮೂಲಕ ಲೇಬಲ್ ಮಾಡಲಾಗಿದ್ದು, ಭವಿಷ್ಯದಲ್ಲಿ ಅದನ್ನು ಅಧ್ಯಯನ ಮತ್ತು ಪ್ರದರ್ಶನಕ್ಕಾಗಿ ಉಪಯೋಗಿಸಲು ಸಿದ್ಧಪಡಿಸಲಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…