ರಾಜ್ಯ

ಮದ್ಯಕ್ಕೆ ಲೈಸನ್ಸ್‌ | 25 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾ ಬಲೆಗೆ ಅಬಕಾರಿ ಡಿಸಿ

ಬೆಂಗಳೂರು : ಲೋಕಾಯುಕ್ತ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ಅಬಕಾರಿ ಉಪ ಆಯುಕ್ತ (ಡಿಸಿ)ರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಅಬಕಾರಿ ಡಿಸಿ ಜಗದೀಶ್ ನಾಯಕ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಮೈಕ್ರೋ ಬ್ರಿವೇರಿ, ಸಿಎಲ್ 7 ಲೈಸನ್ಸ್ ಗೆ 80 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಜಗದೀಶ್, ಮೊದಲ ಕಂತಿನ ಹಣವಾಗಿ 25 ಲಕ್ಷ ರೂ. ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ವೇಳೆ ಅಬಕಾರಿ ಅಧಿಕ್ಷಕ ತಮ್ಮಣ್ಣ, ಮಧ್ಯವರ್ತಿ ಹಾಗೂ ಅಬಕಾರಿ ಇಲಾಖೆಯ ಕಾನ್‌ಸ್ಟೇಬಲ್ ಲಕ್ಕಪ್ಪ ಎಂಬವರನ್ನೂ ಬಂಧಿಸಲಾಗಿದೆ.

ದೂರುದಾರ ಲಕ್ಷ್ಮೀನಾರಾಯಣ ನೀಡಿದ ಮಾಹಿತಿ ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನೂ ವಶಕ್ಕೆ ಪಡೆದಿದ್ದಾರೆ. ಲಕ್ಷ್ಮೀನಾರಾಯಣ ಅವರ ಪ್ರಕಾರ, ಮೈಕ್ರೋ ಬ್ರಿವರಿ ಮತ್ತು ಸಿಎಲ್ 7 ಪರವಾನಗಿಗಳಿಗಾಗಿ ಆರಂಭದಲ್ಲಿ 80 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ನಂತರ ಈ ಮೊತ್ತವನ್ನು 2.25 ಕೋಟಿ ರೂಪಾಯಿಗಳಿಗೆ ಹೆಚ್ಚಿಸಲಾಗಿತ್ತು. ಕೊನೆಗೆ 75 ಲಕ್ಷ ರೂಪಾಯಿಗೆ ಬಂದು ನಿಂತಿದ್ದು, ಮೊದಲ ಕಂತಿನ 25 ಲಕ್ಷ ರೂಪಾಯಿ ಹಣವನ್ನು ನೀಡುವಂತೆ ಒತ್ತಾಯಿಸಲಾಗಿತ್ತು. ಈ ಹಣವನ್ನು ಹೊಂದಿಸಲು ತಾನು ಸ್ನೇಹಿತರಿಂದ ಸಾಲ ಪಡೆದಿದ್ದೆ ಎಂದು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

21 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

21 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

21 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

21 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

21 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

21 hours ago