ಬೆಂಗಳೂರು : ಲೋಕಾಯುಕ್ತ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ಅಬಕಾರಿ ಉಪ ಆಯುಕ್ತ (ಡಿಸಿ)ರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಅಬಕಾರಿ ಡಿಸಿ ಜಗದೀಶ್ ನಾಯಕ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಮೈಕ್ರೋ ಬ್ರಿವೇರಿ, ಸಿಎಲ್ 7 ಲೈಸನ್ಸ್ ಗೆ 80 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಜಗದೀಶ್, ಮೊದಲ ಕಂತಿನ ಹಣವಾಗಿ 25 ಲಕ್ಷ ರೂ. ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ವೇಳೆ ಅಬಕಾರಿ ಅಧಿಕ್ಷಕ ತಮ್ಮಣ್ಣ, ಮಧ್ಯವರ್ತಿ ಹಾಗೂ ಅಬಕಾರಿ ಇಲಾಖೆಯ ಕಾನ್ಸ್ಟೇಬಲ್ ಲಕ್ಕಪ್ಪ ಎಂಬವರನ್ನೂ ಬಂಧಿಸಲಾಗಿದೆ.
ದೂರುದಾರ ಲಕ್ಷ್ಮೀನಾರಾಯಣ ನೀಡಿದ ಮಾಹಿತಿ ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನೂ ವಶಕ್ಕೆ ಪಡೆದಿದ್ದಾರೆ. ಲಕ್ಷ್ಮೀನಾರಾಯಣ ಅವರ ಪ್ರಕಾರ, ಮೈಕ್ರೋ ಬ್ರಿವರಿ ಮತ್ತು ಸಿಎಲ್ 7 ಪರವಾನಗಿಗಳಿಗಾಗಿ ಆರಂಭದಲ್ಲಿ 80 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ನಂತರ ಈ ಮೊತ್ತವನ್ನು 2.25 ಕೋಟಿ ರೂಪಾಯಿಗಳಿಗೆ ಹೆಚ್ಚಿಸಲಾಗಿತ್ತು. ಕೊನೆಗೆ 75 ಲಕ್ಷ ರೂಪಾಯಿಗೆ ಬಂದು ನಿಂತಿದ್ದು, ಮೊದಲ ಕಂತಿನ 25 ಲಕ್ಷ ರೂಪಾಯಿ ಹಣವನ್ನು ನೀಡುವಂತೆ ಒತ್ತಾಯಿಸಲಾಗಿತ್ತು. ಈ ಹಣವನ್ನು ಹೊಂದಿಸಲು ತಾನು ಸ್ನೇಹಿತರಿಂದ ಸಾಲ ಪಡೆದಿದ್ದೆ ಎಂದು ಹೇಳಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…