ರಾಜ್ಯ

ಅಬಕಾರಿ ಇಲಾಖೆ | ವರ್ಗಾವಣೆಗೆ ಹೊಸ ನಿಯಮ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ  ಸಚಿವ ಆರ್ ಬಿ ತಿಮ್ಮಾಪೂರ  ತಿಳಿಸಿದ್ದಾರೆ.

ಅಬಕಾರಿ‌ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಸಚಿವ ತಿಮ್ಮಾಪೂರ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ಅನುಮೋದನೆ ನೀಡಲಾಗಿದ್ದು, ಅನುಬಂಧದಲ್ಲಿ ನೀಡಲಾದ ಕರಡನ್ನು ಹೊರಡಿಸಿ, ಸಂಬಂಧಪಟ್ಟವರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸುವುದು. ಹಾಗೂ ಸ್ವೀಕೃತವಾಗಬಹುದಾದ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಗಣಿಸಿದ ನಂತರ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ನ್ನು ಅಂತಿಮಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ತಿಮ್ಮಾಪೂರ ಅವರು ತಿಳಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿನ ಹುದ್ದೆಗಳನ್ನು ಕಾರ್ಯ ನಿರ್ವಾಹಕ ಮತ್ತು ಕಾರ್ಯನಿರ್ವಾಹಕೇತರ ಎಂದು ವಿಂಗಡಿಸಿ, ಅಬಕಾರಿ ನಿರೀಕ್ಷಕರು, ಅಬಕಾರಿ ಉಪ ನಿರೀಕ್ಷಕರು, ಅಬಕಾರಿ‌ ಮುಖ್ಯ ಪೇದೆ ಮತ್ತು ಅಬಕಾರಿ ಪೇದೆಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮುಖಾಂತರ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಒಬ್ಬ ಅಧಿಕಾರಿ/ಸಿಬ್ಬಂದಿಯನ್ನು ಸತತವಾಗಿ ಎರಡಕ್ಕಿಂತ ಹೆಚ್ಚು ಅವಧಿಗೆ ಕಾರ್ಯನಿರ್ವಾಹಕ ಹುದ್ದೆಗೆ ವರ್ಗಾಯಿಸುವಂತಿಲ್ಲ ಹಾಗೂ ಅಬಕಾರಿ ಅಧಿಕಾರಿಗಳ ಕಡ್ಡಾಯ ವರ್ಗಾವಣೆಗೆ ಹೊಸ ನಿಯಮದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಸಚಿವ ತಿಮ್ಮಾಪೂರ ತಿಳಿಸಿದ್ದಾರೆ.

ಕಳೆದ 05 ವರ್ಷಗಳಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ಕಾರ್ಯನಿರ್ವಾಹಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ ಅಬಕಾರಿ ಜಂಟಿ ಆಯುಕ್ತರು, ಉಪ ಆಯುಕ್ತರು, ಅಧೀಕ್ಷಕರು, ನಿರೀಕ್ಷಕರು ಮತ್ತು ಉಪ ನಿರೀಕ್ಷಕರುಗಳನ್ನು ಸದರಿ ಜಿಲ್ಲೆಗಳನ್ನು ಹೊರತುಪಡಿಸಿ ಇತರೆ ಜಿಲ್ಲೆಗಳಿಗೆ ವರ್ಗಾಯಿಸಲು ಹೊಸ ನಿಯಮದಲ್ಲಿ ಉಲ್ಲೇಖಿಸಲಾಗಿದೆ.

ಅಬಕಾರಿ ಇಲಾಖೆಯು ಸಮವಸ್ತ್ರಾಧಾರಿತ ಮತ್ತು ನಿಯಂತ್ರಕ ಇಲಾಖೆ ಆಗಿರುವುದರಿಂದ ಹೊಸ ವರ್ಗಾವಣೆ ನಿಯಮ ಇಲಾಖೆಯಲ್ಲಿ ಜಾರಿ ಮತ್ತು ತನಿಖೆ ಕಾರ್ಯವನ್ನು ಪರಿಣಾಮಕಾರಿ ಕೈಗೊಳ್ಳಲು ಅನುಕೂಲವಾಗಲಿದೆ. ಜೊತೆಗೆ ಇಲಾಖೆಯಲ್ಲಿ ಪಾರದರ್ಶಕತೆ ವ್ಯವಸ್ಥೆ ಜಾರಿಯಾಗುವುದಿಂದ ಭ್ರಷ್ಟಾಚಾರಕ್ಕೆ ಆಸ್ಪದ ಸಿಗುವುದಿಲ್ಲ ಮತ್ತು ಸರ್ಕಾರಕ್ಕೆ ಆದಾಯ ಕೂಡ ಹೆಚ್ಚಾಗಲಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

9 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

9 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

11 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

11 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

11 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

19 hours ago