ಬೆಂಗಳೂರು: ಜಾತಿ ಜನಗಣತಿ ವರದಿ ಜಾರಿ ಬಗ್ಗೆ ಪರ ವಿರೋಧಗಳು ಆಗಿಂದಲೂ ಮುನ್ನಲೆಗೆ ಬರುತ್ತಲೇ ಇವೆ. ಜಾತಿ ಜನಗಣತಿ ಮಾಡಿಸಿರುವ ರಾಜ್ಯ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲೂ ಪರ ವಿರೋಧಗಳು ಇವೆ. ಆದರೆ, ಇದೀಗ ಕಾಂಗ್ರೆಸ್ನ ಹಿರಿಯ ನಾಯಕ ಹರಿಪ್ರಸಾದ್ ಜಾತಿ ಜನಗಣತಿ ಬಗ್ಗೆ ಸ್ಫೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರು (ಅ.6) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಬಿದ್ದರೆ ಬೀಳಲಿ. ಆದರೆ ಜಾತಿ ಜನಗಣತಿಯನ್ನು ಜಾರಿ ಮಾಡಲೇಬೇಕು ಎಂದು ಹೇಳಿದ್ದಾರೆ.
ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇದೆ. ಆದರೆ ಇದನ್ನು ಜಾರಿಗೆ ತರಲು ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೀನಾಮೇಷ ಎಣಿಸುವುದನ್ನು ಬಿಟ್ಟು ಈ ಕೂಡಲೇ ಜಾತಿಗಣತಿಯನ್ನು ಜಾರಿಗೆ ತರಲಿ ಎಂದು ಬಿ.ಕೆ ಹರಿಪ್ರಾಸಾದ್ ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಜಾತಿಗಣತಿ ಜಾರಿಗೆ ತರುವುದರಿಂದ ಎಲ್ಲಾ ಸಮುದಾಯಗಳಿಗೆ ಅನುಕೂಲವಾಗಲಿದೆ. ಜಾತಿಗಣತಿ ಜಾರಿಯಿಂದಲೇ ಸರ್ಕಾರ ಉರುಳುತ್ತದೆ ಎನ್ನುವುದಾದರೆ ಸರ್ಕಾರ ಬೀಳಲಿ ಬಿಡಿ ಎಂದಿದ್ದಾರೆ.
ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪ್ರಣಾಳಿಕೆ ಬಗ್ಗೆ ಗೌರವ ಇದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜಾತಿಗಣತಿ ಜಾರಿ ಬಗ್ಗೆ ಉಲ್ಲೇಖಿಸಲಾಗಿದೆ. ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಇದರ ಬಗ್ಗೆ ಪ್ರಸ್ಥಾಪಿಸಿ, ಜಾತಿ ಜನಗಣತಿ ಜಾರಿಯ ಪರವಿದ್ದಾರೆ ಎಂದರು.
ಚುನಾವಣೆ ಪ್ರಚಾರದ ವೇಳೆ ರಾಹುಲ್ ಅವರು ಪ್ರಪಂಚವೇ ಬಿದ್ದುಹೋದರೂ ಜಾತಿಗಣತಿ ಜಾರಿಯಾಗಬೇಕು ಎಂದೇ ಹೇಳಿದ್ದಾರೆ. ಹೀಗಾಗಿ ಪ್ರಪಂಚ ತಲೆ ಕೆಳಗಾದರು ಜಾತಿ ಜನಗಣತಿ ಜಾರಿಗೆ ತರಬೇಕು. ಸರ್ಕಾರ ಬಿದ್ದರೆ ಯಾಕೆ ಹೆದರಬೇಕು ಎಂದು ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…