ಬೆಂಗಳೂರು: ಜಾತಿ ಜನಗಣತಿ ವರದಿ ಜಾರಿ ಬಗ್ಗೆ ಪರ ವಿರೋಧಗಳು ಆಗಿಂದಲೂ ಮುನ್ನಲೆಗೆ ಬರುತ್ತಲೇ ಇವೆ. ಜಾತಿ ಜನಗಣತಿ ಮಾಡಿಸಿರುವ ರಾಜ್ಯ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲೂ ಪರ ವಿರೋಧಗಳು ಇವೆ. ಆದರೆ, ಇದೀಗ ಕಾಂಗ್ರೆಸ್ನ ಹಿರಿಯ ನಾಯಕ ಹರಿಪ್ರಸಾದ್ ಜಾತಿ ಜನಗಣತಿ ಬಗ್ಗೆ ಸ್ಫೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರು (ಅ.6) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಬಿದ್ದರೆ ಬೀಳಲಿ. ಆದರೆ ಜಾತಿ ಜನಗಣತಿಯನ್ನು ಜಾರಿ ಮಾಡಲೇಬೇಕು ಎಂದು ಹೇಳಿದ್ದಾರೆ.
ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇದೆ. ಆದರೆ ಇದನ್ನು ಜಾರಿಗೆ ತರಲು ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೀನಾಮೇಷ ಎಣಿಸುವುದನ್ನು ಬಿಟ್ಟು ಈ ಕೂಡಲೇ ಜಾತಿಗಣತಿಯನ್ನು ಜಾರಿಗೆ ತರಲಿ ಎಂದು ಬಿ.ಕೆ ಹರಿಪ್ರಾಸಾದ್ ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಜಾತಿಗಣತಿ ಜಾರಿಗೆ ತರುವುದರಿಂದ ಎಲ್ಲಾ ಸಮುದಾಯಗಳಿಗೆ ಅನುಕೂಲವಾಗಲಿದೆ. ಜಾತಿಗಣತಿ ಜಾರಿಯಿಂದಲೇ ಸರ್ಕಾರ ಉರುಳುತ್ತದೆ ಎನ್ನುವುದಾದರೆ ಸರ್ಕಾರ ಬೀಳಲಿ ಬಿಡಿ ಎಂದಿದ್ದಾರೆ.
ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪ್ರಣಾಳಿಕೆ ಬಗ್ಗೆ ಗೌರವ ಇದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜಾತಿಗಣತಿ ಜಾರಿ ಬಗ್ಗೆ ಉಲ್ಲೇಖಿಸಲಾಗಿದೆ. ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಇದರ ಬಗ್ಗೆ ಪ್ರಸ್ಥಾಪಿಸಿ, ಜಾತಿ ಜನಗಣತಿ ಜಾರಿಯ ಪರವಿದ್ದಾರೆ ಎಂದರು.
ಚುನಾವಣೆ ಪ್ರಚಾರದ ವೇಳೆ ರಾಹುಲ್ ಅವರು ಪ್ರಪಂಚವೇ ಬಿದ್ದುಹೋದರೂ ಜಾತಿಗಣತಿ ಜಾರಿಯಾಗಬೇಕು ಎಂದೇ ಹೇಳಿದ್ದಾರೆ. ಹೀಗಾಗಿ ಪ್ರಪಂಚ ತಲೆ ಕೆಳಗಾದರು ಜಾತಿ ಜನಗಣತಿ ಜಾರಿಗೆ ತರಬೇಕು. ಸರ್ಕಾರ ಬಿದ್ದರೆ ಯಾಕೆ ಹೆದರಬೇಕು ಎಂದು ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…