ಬೆಂಗಳೂರು: ಜಾತಿ ಜನಗಣತಿ ವರದಿ ಜಾರಿ ಬಗ್ಗೆ ಪರ ವಿರೋಧಗಳು ಆಗಿಂದಲೂ ಮುನ್ನಲೆಗೆ ಬರುತ್ತಲೇ ಇವೆ. ಜಾತಿ ಜನಗಣತಿ ಮಾಡಿಸಿರುವ ರಾಜ್ಯ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲೂ ಪರ ವಿರೋಧಗಳು ಇವೆ. ಆದರೆ, ಇದೀಗ ಕಾಂಗ್ರೆಸ್ನ ಹಿರಿಯ ನಾಯಕ ಹರಿಪ್ರಸಾದ್ ಜಾತಿ ಜನಗಣತಿ ಬಗ್ಗೆ ಸ್ಫೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರು (ಅ.6) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಬಿದ್ದರೆ ಬೀಳಲಿ. ಆದರೆ ಜಾತಿ ಜನಗಣತಿಯನ್ನು ಜಾರಿ ಮಾಡಲೇಬೇಕು ಎಂದು ಹೇಳಿದ್ದಾರೆ.
ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇದೆ. ಆದರೆ ಇದನ್ನು ಜಾರಿಗೆ ತರಲು ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೀನಾಮೇಷ ಎಣಿಸುವುದನ್ನು ಬಿಟ್ಟು ಈ ಕೂಡಲೇ ಜಾತಿಗಣತಿಯನ್ನು ಜಾರಿಗೆ ತರಲಿ ಎಂದು ಬಿ.ಕೆ ಹರಿಪ್ರಾಸಾದ್ ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಜಾತಿಗಣತಿ ಜಾರಿಗೆ ತರುವುದರಿಂದ ಎಲ್ಲಾ ಸಮುದಾಯಗಳಿಗೆ ಅನುಕೂಲವಾಗಲಿದೆ. ಜಾತಿಗಣತಿ ಜಾರಿಯಿಂದಲೇ ಸರ್ಕಾರ ಉರುಳುತ್ತದೆ ಎನ್ನುವುದಾದರೆ ಸರ್ಕಾರ ಬೀಳಲಿ ಬಿಡಿ ಎಂದಿದ್ದಾರೆ.
ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪ್ರಣಾಳಿಕೆ ಬಗ್ಗೆ ಗೌರವ ಇದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜಾತಿಗಣತಿ ಜಾರಿ ಬಗ್ಗೆ ಉಲ್ಲೇಖಿಸಲಾಗಿದೆ. ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಇದರ ಬಗ್ಗೆ ಪ್ರಸ್ಥಾಪಿಸಿ, ಜಾತಿ ಜನಗಣತಿ ಜಾರಿಯ ಪರವಿದ್ದಾರೆ ಎಂದರು.
ಚುನಾವಣೆ ಪ್ರಚಾರದ ವೇಳೆ ರಾಹುಲ್ ಅವರು ಪ್ರಪಂಚವೇ ಬಿದ್ದುಹೋದರೂ ಜಾತಿಗಣತಿ ಜಾರಿಯಾಗಬೇಕು ಎಂದೇ ಹೇಳಿದ್ದಾರೆ. ಹೀಗಾಗಿ ಪ್ರಪಂಚ ತಲೆ ಕೆಳಗಾದರು ಜಾತಿ ಜನಗಣತಿ ಜಾರಿಗೆ ತರಬೇಕು. ಸರ್ಕಾರ ಬಿದ್ದರೆ ಯಾಕೆ ಹೆದರಬೇಕು ಎಂದು ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…