Mysore
26
broken clouds

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

ಉಚಿತ ಬಸ್‌ ಪ್ರಯಾಣವನ್ನು ಮಂತ್ರಾಲಯದವರೆಗೆ ವಿಸ್ತರಿಸಿ: ಮಂತ್ರಾಲಯ ಶ್ರೀ

ಕೊಪ್ಪಳ: ಕರ್ನಾಟಕ ಹಾಗೂ ತೆಲಂಗಾಣ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಮಾಡಲಾಗಿದೆ. ಈ ಸೇವೆಯನ್ನು ಮಂತ್ರಾಲಯದವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರವನ್ನು ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಮನವಿ ಮಾಡಿದ್ದಾರೆ.

ಇಂದು ಗಂಗಾವತಿ ತಾಲೂಕಿನ ನವ ಬೃಂದಾವನ ಗಡ್ಡೆಯಲ್ಲಿ ಪದ್ಮನಾಭತೀರ್ಥರ ಆರಾಧನೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಕರ್ನಾಟಕದ ಗಡಿಯವರೆಗೂ ಮಹಿಳೆಯರಿಗೆ ಉಚಿತ ಬಸ್ ಸೇವೆ ಇದೆ.

ಕರ್ನಾಟಕದ ಗಡಿಯಿಂದ ಮಂತ್ರಾಲಯ ಕೇವಲ ಎಂಟು ಕಿಲೋ ಮೀಟರ್ ದೂರವಿದ್ದು, ಅಲ್ಲಿಯವರೆಗೂ ಉಚಿತ ಬಸ್ ಸೇವೆ ಕಲ್ಪಿಸಬೇಕು ಎಂದು ಶ್ರೀಗಳು ತಿಳಿಸಿದ್ದಾರೆ. ಈದರಿಂದ ಶ್ರೀಕ್ಷೇತ್ರ ಮಂತ್ರಾಲಯಕ್ಕೆ ಬರುವ ಭಕ್ತರಿಗೆ ಅನುಕೂಲವಾಗುತ್ತದೆ ಎಂದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!