ರಾಜ್ಯ

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು ಇಂಡಿಗೋ ವಿಮಾನದಲ್ಲೇ ಸಿಲುಕಿದ್ದ ಘಟನೆ ನಡೆದಿದೆ.

ಶಾಸಕರ ವಿಮಾನ ಬೆಳಗ್ಗೆ 5:30ಕ್ಕೆ ದೆಹಲಿಯಿಂದ ಹೊರಡಬೇಕಿತ್ತು. ವಿಮಾನದ ಒಳಗಡೆ ಕುಳಿತುಕೊಂಡ ಬಳಿಕ ದಟ್ಟವಾದ ಹೊಗೆಯಿಂದಾಗಿ ವಿಮಾನ ಟೇಕಾಫ್ ಆಗಲಿಲ್ಲ. ಸುಮಾರು 4 ಗಂಟೆಯಿಂದ ಶಾಸಕರು ವಿಮಾನದಲ್ಲೇ ಕುಳಿತ್ತಿದ್ದರು. ಬೆಳಗ್ಗೆ 10 ಗಂಟೆಯಾದರೂ ವಿಮಾನ ಟೇಕಾಫ್ ಅಗಿಲ್ಲ. ವಿಮಾನ ಎಷ್ಟು ಗಂಟೆಗೆ ಟೇಕಾಫ್ ಆಗಲಿದೆ ಎಂಬ ಮಾಹಿತಿಯನ್ನು ಸಿಬ್ಬಂದಿ ನೀಡಿಲ್ಲ. ದೆಹಲಿಯಲ್ಲಿ ಹವಾಮಾನ ವೈಪರೀತ್ಯದಿಂದ ವಿಮಾನಗಳ ಟೇಕಾಫ್ ಮತ್ತು ಲ್ಯಾಂಡಿಂಗ್‍ಗೆ ಸಮಸ್ಯೆಯಾಗಿದೆ.

ಮಾಹಿತಿಯ ಪ್ರಕಾರ, ಈ ವಿಮಾನ ಬೆಳಗ್ಗೆ 5.30ಕ್ಕೆ ದೆಹಲಿಯಿಂದ ಟೇಕ್‍ಆಫ್ ಆಗಬೇಕಿತ್ತು. ಆದರೆ ವಿಮಾನದಲ್ಲಿ ಪ್ರಯಾಣಿಕರು ಕುಳಿತ ನಂತರವೇ ದೆಹಲಿಯಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡಿದ್ದು, ಇದರಿಂದ ವಿಮಾನ ಹಾರಾಟಕ್ಕೆ ಅನುಮತಿ ಲಭ್ಯವಾಗಿಲ್ಲ. ಪರಿಣಾಮವಾಗಿ, ಬೆಳಗ್ಗೆ 10 ಗಂಟೆಯಾದರೂ ವಿಮಾನ ಟೇಕ್‍ಆಫ್ ಆಗಲಿಲ್ಲ.

ಇದನ್ನು ಓದಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಸುಮಾರು ನಾಲ್ಕು ಗಂಟೆಗಳಿಗಿಂತ ಹೆಚ್ಚು ಕಾಲ ಶಾಸಕರು ಮತ್ತು ಸಚಿವರು ವಿಮಾನದಲ್ಲೇ ಕುಳಿತು ಕಾಯುವಂತಾಯಿತು. ವಿಮಾನ ಸಿಬ್ಬಂದಿಯಿಂದ ಸ್ಪಷ್ಟ ಮಾಹಿತಿಯ ಕೊರತೆಯೂ ಅಸಮಾಧಾನಕ್ಕೆ ಕಾರಣವಾಗಿದೆ. “ವಿಮಾನ ಯಾವಾಗ ಟೇಕ್‍ಆಫ್ ಆಗುತ್ತದೆ ಎಂಬುದರ ಬಗ್ಗೆ ಸಿಬ್ಬಂದಿ ಯಾವುದೇ ಖಚಿತ ಮಾಹಿತಿ ನೀಡುತ್ತಿಲ್ಲ” ಎಂದು ಕೆಲ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಉಂಟಾದ ತೀವ್ರ ಹವಾಮಾನ ವೈಪರೀತ್ಯ ಮತ್ತು ದಟ್ಟ ಹೊಗೆಯ ಪರಿಣಾಮವಾಗಿ ಹಲವಾರು ವಿಮಾನಗಳ ಟೇಕ್‍ಆಫ್ ಹಾಗೂ ಲ್ಯಾಂಡಿಂಗ್ ಕಾರ್ಯಾಚರಣೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ದೆಹಲಿಯಿಂದ ವಿವಿಧ ನಗರಗಳಿಗೆ ಹೊರಡುವ ಮತ್ತು ಆಗಮಿಸುವ ವಿಮಾನಗಳು ವಿಳಂಬವಾಗಿವೆ.

ವಿಮಾನದಲ್ಲಿ ಸಿಲುಕಿದ್ದವರು
ಕೋನರೆಡ್ಡಿ, ಬಸನಗೌಡ ಬಾದರ್ಲಿ, ಆನಂದ್ ಗಡದೇವರಮಠ, ಹೆಚ್‍ಕೆ ಪಾಟೀಲ್, ಲಕ್ಷ್ಮೀ ಹೆಬಾಳ್ಕರ್, ಶರಣ ಪ್ರಕಾಶ್ ಪಾಟೀಲ್, ರಾಜು ಗೌಡ, ಸಲೀಂ ಅಹಮದ್, ತನ್ವೀರ್ ಸೇಠ್, ಸತೀಶ್ ಜಾರಕಿಹೊಳಿ, ಜಿ ಎಸ್ ಪಾಟೀಲ್, ಮಾಲೀಕಯ್ಯ ಗುತ್ತೇದಾರ್, ಈಶ್ವರ್ ಖಂಡ್ರೆ, ಜೆ ಟಿ ಪಾಟೀಲ್, ತಿಪ್ಪಣ್ಣ ಕಾಮಕನೂರ್, ನಾಗೇಂದ್ರ, ಎಂ ಬಿ ಪಾಟೀಲ್, ಅಲ್ಲಮಪ್ರಭು, ರೆಹಮಾನ್ ಖಾನ್, ಕೆಜೆ ಜಾರ್ಜ್. ಸೇರಿದಂತೆ ಶಾಸಕರು ಮತ್ತು ಸಚಿವರು ವಿಮಾನದಲ್ಲೇ ಸಿಲುಕಿದ್ದರು.

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

5 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

5 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

10 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

10 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

10 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

10 hours ago