ಬೆಂಗಳೂರು: ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ.
‘ನಿರಂತರ’ ಯೋಜನೆಯಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಹಾಜರಾತಿಯನ್ನು ಕೃತಕ ಬುದ್ಧಿಮತ್ತೆ ಚಾಲಿತ, ಮುಖ ಚಹರೆ ಗುರುತು ಆಧಾರಿತವಾಗಿ ತೆಗೆದುಕೊಳ್ಳಲಾಗುತ್ತದೆ.
ಸುಮಾರು 5 ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ಕರ್ನಾಟಕ ಸ್ಟೇಟ್ ಡೇಟಾ ಸೆಂಟರ್ ಮೂಲಕ ನಿರ್ವಹಣೆ ಮಾಡಲಾಗುತ್ತದೆ. ಇದಕ್ಕಾಗಿ ಸಾಫ್ಟ್ವೇರ್ ಕೂಡ ಸಿದ್ಧಪಡಿಸಲಾಗುತ್ತಿದೆ. ಇದು ಗರಿಷ್ಠ ಗೌಪ್ಯತೆ ಮತ್ತು ಸುರಕ್ಷತೆ ಕಾಪಾಡುತ್ತದೆ. ಪ್ರಸಕ್ತ ವರ್ಷದಿಂದಲೇ ಇ-ಹಾಜರಾತಿ ಜಾರಿಗೆ ಬರಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದರೂ, ನಕಲಿ ದಾಖಲಾತಿ ತೋರಿಸಿ ಸರ್ಕಾರದ ವಿವಿಧ ಸೌಲಭ್ಯ ಪಡೆಯುತ್ತಿರುವ ಶಾಲೆಗಳ ಕಳ್ಳಾಟಕ್ಕೆ ತಡೆ ಹಾಕಲು ಮುಂದಾಗಿರುವ ಶಿಕ್ಷಣ ಇಲಾಖೆ, ಇ–ಹಾಜರಾತಿ ಕಡ್ಡಾಯದತ್ತ ಹೆಜ್ಜೆ ಇಟ್ಟಿದೆ. ಇದೇ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಸರ್ಕಾರದ ಅನುದಾನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ಇ–ಹಾಜರಾತಿ ಕಡ್ಡಾಯಗೊಳಿಸುವ ಆದೇಶವನ್ನೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…