ರಾಜ್ಯ

ಪ್ರಾಥಮಿಕ, ಪ್ರೌಢ ಶಾಲಾ ಮಕ್ಕಳಿಗೆ ಮುಖಚರ್ಯೆ ಆಧಾರಿತ ಇ-ಹಾಜರಾತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ.

‘ನಿರಂತರ’ ಯೋಜನೆಯಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಹಾಜರಾತಿಯನ್ನು ಕೃತಕ ಬುದ್ಧಿಮತ್ತೆ ಚಾಲಿತ, ಮುಖ ಚಹರೆ ಗುರುತು ಆಧಾರಿತವಾಗಿ ತೆಗೆದುಕೊಳ್ಳಲಾಗುತ್ತದೆ.

ಸುಮಾರು 5 ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ಕರ್ನಾಟಕ ಸ್ಟೇಟ್ ಡೇಟಾ ಸೆಂಟರ್ ಮೂಲಕ ನಿರ್ವಹಣೆ ಮಾಡಲಾಗುತ್ತದೆ. ಇದಕ್ಕಾಗಿ ಸಾಫ್ಟ್‌ವೇರ್‌ ಕೂಡ ಸಿದ್ಧಪಡಿಸಲಾಗುತ್ತಿದೆ. ಇದು ಗರಿಷ್ಠ ಗೌಪ್ಯತೆ ಮತ್ತು ಸುರಕ್ಷತೆ ಕಾಪಾಡುತ್ತದೆ. ಪ್ರಸಕ್ತ ವರ್ಷದಿಂದಲೇ ಇ-ಹಾಜರಾತಿ ಜಾರಿಗೆ ಬರಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದರೂ, ನಕಲಿ ದಾಖಲಾತಿ ತೋರಿಸಿ ಸರ್ಕಾರದ ವಿವಿಧ ಸೌಲಭ್ಯ ಪಡೆಯುತ್ತಿರುವ ಶಾಲೆಗಳ ಕಳ್ಳಾಟಕ್ಕೆ ತಡೆ ಹಾಕಲು ಮುಂದಾಗಿರುವ ಶಿಕ್ಷಣ ಇಲಾಖೆ, ಇ–ಹಾಜರಾತಿ ಕಡ್ಡಾಯದತ್ತ ಹೆಜ್ಜೆ ಇಟ್ಟಿದೆ. ಇದೇ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಸರ್ಕಾರದ ಅನುದಾನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ಇ–ಹಾಜರಾತಿ ಕಡ್ಡಾಯಗೊಳಿಸುವ ಆದೇಶವನ್ನೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago