ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ‘ನಂಬಿಕೆ ನಕ್ಷೆ’ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಬ್ರ್ಯಾಂಡ್ ಬೆಂಗಳೂರು ಕೇವಲ ನಾಟಕದ ಮತ್ತೊಂದು ಅಧ್ಯಾಯವಷ್ಟೆ ಎಂಬುದು ಬೆಂಗಳೂರಿನ ಜನತೆಯ ಬಲವಾದ ನಂಬಿಕೆಯಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು “ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ‘ನಂಬಿಕೆ ನಕ್ಷೆ’ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿರುವುದು ಬ್ರ್ಯಾಂಡ್ ಬೆಂಗಳೂರು ನಾಟಕದ ಮತ್ತೊಂದು ಅಧ್ಯಾಯವಷ್ಟೇ ಎಂಬುದು ಬೆಂಗಳೂರಿನ ಜನತೆಯ ಬಲವಾದ ನಂಬಿಕೆ.
ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಅನೇಕ ಹೇಳಿಕೆಗಳು ಘೋಷಣೆಯಲ್ಲೇ ಉಳಿದಿರುವುದರಿಂದ ಸಾರ್ವಜನಿಕರಿಗೆ ಇವರ ಮೇಲೆ ಕಿಂಚಿತ್ತೂ ನಂಬಿಕೆಯೇ ಇಲ್ಲದಂತಾಗಿದೆ.
ಬೆಂಗಳೂರಿನ ಜನತೆಗೆ:
ಮೇಕೆದಾಟು ನೀರು ಸಿಗುವ ನಂಬಿಕೆ ಇಲ್ಲ
ರಸ್ತೆ ಗುಂಡಿ ಮುಚ್ಚುವ ಬಗ್ಗೆ ನಂಬಿಕೆ ಇಲ್ಲ
ಮನೆ ಬಾಗಿಲಿಗೆ ಆಡಳಿತ ಘೋಷಣೆ ಬಗ್ಗೆ ನಂಬಿಕೆ ಇಲ್ಲ
ಕಾನೂನು ಸುವ್ಯವಸ್ಥೆ ಬಗ್ಗೆ ನಂಬಿಕೆ ಇಲ್ಲ
ನುಡಿದಂತೆ ನಡೆದಿದ್ದೇವೆ ಎಂಬ ಬಗ್ಗೆ ನಂಬಿಕೆ ಇಲ್ಲ
ಭ್ರಷ್ಟಾಚಾರ ಮುಕ್ತ ಆಡಳಿತದ ಬಗ್ಗೆಯಂತೂ ಎಳ್ಳಷ್ಟೂ ನಂಬಿಕೆ ಇಲ್ಲ.
ಒಟ್ಟಿನಲ್ಲಿ ಈ ಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ ಆಗಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿರೋಧಾಭಾಸ ಎಂದರೆ ಅತಿಶಯೋಕ್ತಿ ಅಲ್ಲ” ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…