ರಾಜ್ಯ

ಅಪನಂಬಿಕೆ ಸರ್ಕಾರದಿಂದ ನಂಬಿಕೆ ಯೋಜನೆ: ಆರ್‌.ಅಶೋಕ್‌

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ‘ನಂಬಿಕೆ ನಕ್ಷೆ’ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಬ್ರ್ಯಾಂಡ್‌ ಬೆಂಗಳೂರು ಕೇವಲ ನಾಟಕದ ಮತ್ತೊಂದು ಅಧ್ಯಾಯವಷ್ಟೆ ಎಂಬುದು ಬೆಂಗಳೂರಿನ ಜನತೆಯ ಬಲವಾದ ನಂಬಿಕೆಯಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು “ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ‘ನಂಬಿಕೆ ನಕ್ಷೆ’ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಹೇಳಿರುವುದು ಬ್ರ್ಯಾಂಡ್ ಬೆಂಗಳೂರು ನಾಟಕದ ಮತ್ತೊಂದು ಅಧ್ಯಾಯವಷ್ಟೇ ಎಂಬುದು ಬೆಂಗಳೂರಿನ ಜನತೆಯ ಬಲವಾದ ನಂಬಿಕೆ.

ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಅನೇಕ ಹೇಳಿಕೆಗಳು ಘೋಷಣೆಯಲ್ಲೇ ಉಳಿದಿರುವುದರಿಂದ ಸಾರ್ವಜನಿಕರಿಗೆ ಇವರ ಮೇಲೆ ಕಿಂಚಿತ್ತೂ ನಂಬಿಕೆಯೇ ಇಲ್ಲದಂತಾಗಿದೆ.

ಬೆಂಗಳೂರಿನ ಜನತೆಗೆ:

ಮೇಕೆದಾಟು ನೀರು ಸಿಗುವ ನಂಬಿಕೆ ಇಲ್ಲ
ರಸ್ತೆ ಗುಂಡಿ ಮುಚ್ಚುವ ಬಗ್ಗೆ ನಂಬಿಕೆ ಇಲ್ಲ
ಮನೆ ಬಾಗಿಲಿಗೆ ಆಡಳಿತ ಘೋಷಣೆ ಬಗ್ಗೆ ನಂಬಿಕೆ ಇಲ್ಲ
ಕಾನೂನು ಸುವ್ಯವಸ್ಥೆ ಬಗ್ಗೆ ನಂಬಿಕೆ ಇಲ್ಲ
ನುಡಿದಂತೆ ನಡೆದಿದ್ದೇವೆ ಎಂಬ ಬಗ್ಗೆ ನಂಬಿಕೆ ಇಲ್ಲ
ಭ್ರಷ್ಟಾಚಾರ ಮುಕ್ತ ಆಡಳಿತದ ಬಗ್ಗೆಯಂತೂ ಎಳ್ಳಷ್ಟೂ ನಂಬಿಕೆ ಇಲ್ಲ.

ಒಟ್ಟಿನಲ್ಲಿ ಈ ಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ ಆಗಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿರೋಧಾಭಾಸ ಎಂದರೆ ಅತಿಶಯೋಕ್ತಿ ಅಲ್ಲ” ಎಂದು ಬರೆದುಕೊಂಡಿದ್ದಾರೆ.

https://x.com/RAshokaBJP/status/1830838598934864075

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

4 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

13 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

23 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago