ಬೆಂಗಳೂರು: ನಕಲಿ ವೈದ್ಯರ ವಿರುದ್ಧ ಸರ್ಕಾರದಿಂದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಸದನದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಅಂತಹ ವೈದ್ಯರ ವಿರುದ್ಧ ಸರ್ಕಾರದಿಂದ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ.
ವೈದ್ಯರ ವಿರುದ್ಧ ಕಠಿಣ ಕ್ರಮ ತೆತೆದುಕೊಂಡು, ನಕಲಿ ಕ್ಲಿನಿಕ್ಗಳನ್ನು ಸಹ ಮುಚ್ಚಲಾಗುವುದು. ಇದಲ್ಲದೇ ವೈದ್ಯರು ಕ್ಲಿನಿಕ್ ಮುಂದೆ ಗ್ರೀನ್ ಬೋರ್ಡ್ ಹಾಕೋದನ್ನು ಕಡ್ಡಾಯ ಮಾಡಲಾಗಿದೆ ಎಂದರು.
ಇನ್ನೂ ಔಷಧಿ ನೀಡುವ ಕ್ಲಿನಿಕ್ನವರು ಕೂಡ ನೀಲಿ ಬೋರ್ಡ್ ಹಾಕಲು ಖಡಕ್ ಸೂಚನೆ ನೀಡಲಾಗಿದೆ. ನಕಲಿ ವೈದ್ಯರಿಗೆ 3 ವರ್ಷ ಜೈಲು ಶಿಕ್ಷೆ ನೀಡಲಾಗುತ್ತದೆ. ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗಟ್ಟಲು ಮತ್ತಷ್ಟು ಕ್ರಮ ಕೈಗೊಳ್ಳಲಾಗಿದೆ ಎಂದರು.
ರಾಜ್ಯದಲ್ಲಿ ನಕಲಿ ವೈದ್ಯರು ಗಲ್ಲಿ ಗಲ್ಲಿಯಲ್ಲಿಯಲ್ಲಿಯೂ ಇದ್ದು, ಜನರ ಜೀವನ ಜೊತೆ ಆಟ ಆಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ನಾವು ಸರ್ವೆ ನಡೆಸಿ ನಕಲಿ ಡಾಕ್ಟರ್ಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉತ್ತಮ ವೈದ್ಯರು ಸಿಗುವ ರೀತಿ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…