ರಾಜ್ಯ

ಹೈದರಾಬಾದ್‌ನಲ್ಲಿ ನಕಲಿ ಮೈಸೂರು ಸ್ಯಾಂಡಲ್‌ ಸೋಪ್‌ ತಯಾರಿಕಾ ಘಟಕಾ ಪತ್ತೆ

ಬೆಂಗಳೂರು : ನಕಲಿ ಮೈಸೂರು ಸ್ಯಾಂಡಲ್ ಸೋಪ್‌ಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ತಯಾರಿಕಾ ಘಟಕ ಹೈದರಾಬಾದ್‌ನಲ್ಲಿ ಪತ್ತೆಯಾಗಿದ್ದು, ಸುಮಾರು 2 ಕೋಟಿ ರೂ. ಮೌಲ್ಯದ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಹೈದರಾಬಾದ್​​ನಲ್ಲಿ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್‌ಗಳನ್ನು ಹೋಲುವ ನಕಲಿ ಸೋಪ್‌ಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು, ನಕಲಿ ಉತ್ಪನ್ನ, ಪ್ಯಾಕಿಂಗ್​ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಸೇರಿದಂತೆ ಹಲವು ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವರ ಬಂಧಿಸಲಾಗಿದ್ದು, ಈ ಸಂಬಂಧ ಮಾಲಕಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಲದ ಮಾಹಿತಿ ನೀಡಿದ ಸಚಿವ ಎಂ.ಬಿ ಪಾಟೀಲ್‌: ಹೈದರಾಬಾದ್‌ ಮಾರುಕಟ್ಟೆಯಲ್ಲಿ ನಕಲಿ ಮೈಸೂರು ಸ್ಯಾಂಡಲ್‌ ಸೋಪ್‌ ಪೂರೈಕೆಯಾಗುತ್ತಿರುವುದು ಕಂಡು ಬಂದ ಹಿನ್ನಲೆ ಅನಾಮಧೇಯ ಕರೆಯೊಂದು ಸಚಿವ ಎಂ.ಬಿ ಪಾಟೀಲ್‌ ಅವರಿಗೆ ಬಂದಿದೆ.

ಈ ಸಂಬಂಧ ಕಾರ್ಖಾನೆ ಎಂ.ಡಿ ಡಾ. ಪ್ರಶಾಂತ್‌ ಗೆ ನಿಗಾ ವಹಿಸಲು ಸೂಚಿಸಿದ್ದರು.

ಕಾರ್ಯಪ್ರವೃತ್ತರಾಗಿದ್ದ ಸಿಕಂದರಾಬಾದಿನಲ್ಲಿರುವ ಕೆಎಸ್​ಡಿಎಲ್ ಅಧಿಕೃತ ಮಾರಾಟ ಕಚೇರಿ ಸಿಬ್ಬಂದಿ ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟ ಕಂಡುಬಂದಿದೆ. ಸ್ವತಃ 1 ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ ಮೂಲ ಪತ್ತೆಗೆ ಕೆಎಸ್​ಡಿಎಲ್ ಸಿಬ್ಬಂದಿ ಮುಂದಾಗಿದ್ದರು.

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂ. ಬೆಲೆಯ ಸೋಪ್ ಖರೀದಿಗೆ ಕೆಎಸ್​ಡಿಎಲ್ ಸಿಬ್ಬಂದಿ ಆರ್ಡರ್ ಕೊಟ್ಟಿದ್ದರು. ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ನಕಲಿ ಮೈಸೂರು ಸ್ಯಾಂಡಲ್‌ ಸೋಪ್‌ ಉತ್ಪಾದನೆ ಮಾಡುತ್ತಿದ್ದ ಸ್ಥಳವನ್ನು ಪತ್ತೆ ಹಚ್ಚಿದ್ದಾರೆ.

andolanait

Recent Posts

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

40 mins ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

1 hour ago

ಸಕಾಲಕ್ಕೆ ಸಿಗದ ಆಂಬುಲೆನ್ಸ್‌ ; ಡೋಲಿಯಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ದ ಗ್ರಾಮಸ್ಥರು

ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…

2 hours ago

ಮಾತು ಕೊಟ್ಟಂತೆ ನಡೆದಿದ್ದೇವೆ : ಸಿಎಂ

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…

2 hours ago

4 ಕೆ.ಜಿಗೂ ಹೆಚ್ಚು ಹೆರಾಯಿನ್‌ ವಶ : ಪಾಕ್‌ ಕಳ್ಳ ಸಾಗಣಿಕೆ ಪ್ರಯತ್ನ ವಿಫಲ

ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…

3 hours ago

ಮದ್ದೂರು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ : ಸಚಿವ ಚಲುವರಾಯಸ್ವಾಮಿ ಭರವಸೆ

ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…

3 hours ago