ಬೆಂಗಳೂರು : ನಕಲಿ ಮೈಸೂರು ಸ್ಯಾಂಡಲ್ ಸೋಪ್ಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ತಯಾರಿಕಾ ಘಟಕ ಹೈದರಾಬಾದ್ನಲ್ಲಿ ಪತ್ತೆಯಾಗಿದ್ದು, ಸುಮಾರು 2 ಕೋಟಿ ರೂ. ಮೌಲ್ಯದ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.
ಹೈದರಾಬಾದ್ನಲ್ಲಿ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ಗಳನ್ನು ಹೋಲುವ ನಕಲಿ ಸೋಪ್ಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು, ನಕಲಿ ಉತ್ಪನ್ನ, ಪ್ಯಾಕಿಂಗ್ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಸೇರಿದಂತೆ ಹಲವು ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವರ ಬಂಧಿಸಲಾಗಿದ್ದು, ಈ ಸಂಬಂಧ ಮಾಲಕಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಲದ ಮಾಹಿತಿ ನೀಡಿದ ಸಚಿವ ಎಂ.ಬಿ ಪಾಟೀಲ್: ಹೈದರಾಬಾದ್ ಮಾರುಕಟ್ಟೆಯಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ಪೂರೈಕೆಯಾಗುತ್ತಿರುವುದು ಕಂಡು ಬಂದ ಹಿನ್ನಲೆ ಅನಾಮಧೇಯ ಕರೆಯೊಂದು ಸಚಿವ ಎಂ.ಬಿ ಪಾಟೀಲ್ ಅವರಿಗೆ ಬಂದಿದೆ.
ಈ ಸಂಬಂಧ ಕಾರ್ಖಾನೆ ಎಂ.ಡಿ ಡಾ. ಪ್ರಶಾಂತ್ ಗೆ ನಿಗಾ ವಹಿಸಲು ಸೂಚಿಸಿದ್ದರು.
ಕಾರ್ಯಪ್ರವೃತ್ತರಾಗಿದ್ದ ಸಿಕಂದರಾಬಾದಿನಲ್ಲಿರುವ ಕೆಎಸ್ಡಿಎಲ್ ಅಧಿಕೃತ ಮಾರಾಟ ಕಚೇರಿ ಸಿಬ್ಬಂದಿ ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟ ಕಂಡುಬಂದಿದೆ. ಸ್ವತಃ 1 ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ ಮೂಲ ಪತ್ತೆಗೆ ಕೆಎಸ್ಡಿಎಲ್ ಸಿಬ್ಬಂದಿ ಮುಂದಾಗಿದ್ದರು.
ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂ. ಬೆಲೆಯ ಸೋಪ್ ಖರೀದಿಗೆ ಕೆಎಸ್ಡಿಎಲ್ ಸಿಬ್ಬಂದಿ ಆರ್ಡರ್ ಕೊಟ್ಟಿದ್ದರು. ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ಉತ್ಪಾದನೆ ಮಾಡುತ್ತಿದ್ದ ಸ್ಥಳವನ್ನು ಪತ್ತೆ ಹಚ್ಚಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…