ಬೆಂಗಳೂರು : ನಕಲಿ ಮೈಸೂರು ಸ್ಯಾಂಡಲ್ ಸೋಪ್ಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ತಯಾರಿಕಾ ಘಟಕ ಹೈದರಾಬಾದ್ನಲ್ಲಿ ಪತ್ತೆಯಾಗಿದ್ದು, ಸುಮಾರು 2 ಕೋಟಿ ರೂ. ಮೌಲ್ಯದ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.
ಹೈದರಾಬಾದ್ನಲ್ಲಿ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ಗಳನ್ನು ಹೋಲುವ ನಕಲಿ ಸೋಪ್ಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು, ನಕಲಿ ಉತ್ಪನ್ನ, ಪ್ಯಾಕಿಂಗ್ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಸೇರಿದಂತೆ ಹಲವು ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವರ ಬಂಧಿಸಲಾಗಿದ್ದು, ಈ ಸಂಬಂಧ ಮಾಲಕಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಲದ ಮಾಹಿತಿ ನೀಡಿದ ಸಚಿವ ಎಂ.ಬಿ ಪಾಟೀಲ್: ಹೈದರಾಬಾದ್ ಮಾರುಕಟ್ಟೆಯಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ಪೂರೈಕೆಯಾಗುತ್ತಿರುವುದು ಕಂಡು ಬಂದ ಹಿನ್ನಲೆ ಅನಾಮಧೇಯ ಕರೆಯೊಂದು ಸಚಿವ ಎಂ.ಬಿ ಪಾಟೀಲ್ ಅವರಿಗೆ ಬಂದಿದೆ.
ಈ ಸಂಬಂಧ ಕಾರ್ಖಾನೆ ಎಂ.ಡಿ ಡಾ. ಪ್ರಶಾಂತ್ ಗೆ ನಿಗಾ ವಹಿಸಲು ಸೂಚಿಸಿದ್ದರು.
ಕಾರ್ಯಪ್ರವೃತ್ತರಾಗಿದ್ದ ಸಿಕಂದರಾಬಾದಿನಲ್ಲಿರುವ ಕೆಎಸ್ಡಿಎಲ್ ಅಧಿಕೃತ ಮಾರಾಟ ಕಚೇರಿ ಸಿಬ್ಬಂದಿ ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟ ಕಂಡುಬಂದಿದೆ. ಸ್ವತಃ 1 ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ ಮೂಲ ಪತ್ತೆಗೆ ಕೆಎಸ್ಡಿಎಲ್ ಸಿಬ್ಬಂದಿ ಮುಂದಾಗಿದ್ದರು.
ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂ. ಬೆಲೆಯ ಸೋಪ್ ಖರೀದಿಗೆ ಕೆಎಸ್ಡಿಎಲ್ ಸಿಬ್ಬಂದಿ ಆರ್ಡರ್ ಕೊಟ್ಟಿದ್ದರು. ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ಉತ್ಪಾದನೆ ಮಾಡುತ್ತಿದ್ದ ಸ್ಥಳವನ್ನು ಪತ್ತೆ ಹಚ್ಚಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…