ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ಭಾನು ಚಂದ್ರರೆಡ್ಡಿ ಹಾಗೂ ಸಾಜಿಯಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ಟೆಕ್ಕಿ ದಂಪತಿಗಳಾಗಿದ್ದಾರೆ.
ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಅನೇಕ ಬಾರಿ ಕಲಹಗಳಾಗಿತ್ತು. ಇಬ್ಬರೂ ಮಾನಸಿಕ ಒತ್ತಡ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ನಿನ್ನೆ ಪತ್ನಿ ಇಲ್ಲದಿರುವಾಗ ಪತಿ ಭಾನು ಚಂದ್ರರೆಡ್ಡಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಜಿಯಾ ಮನೆಗೆ ಬಂದು ಗಂಡನ ಹೆಣ ನೋಡಿ ಅಪಾರ್ಟ್ಮೆಂಟ್ ಮೇಲಿನಿಂದ ಹಾರಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





