ವಿಜಯಪುರ: ಹೈಕಮಾಂಡ್ಗೆ ಯಡಿಯೂರಪ್ಪ ಹಾಗೂ ವಿಜಯೇಂದ್ರರ ಕರ್ಮಕಾಂಡಗಳ ಬಗ್ಗೆ ವಿವರಣೆ ನೀಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ನಾನು ಹಾಗೂ ನಮ್ಮ ತಂಡ ದೆಹಲಿಗೆ ಹೋಗುತ್ತೇವೆ. ಹೈಕಮಾಂಡ್ ಭೇಟಿ ಮಾಡಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಅವರ ಕರ್ಮಕಾಂಡಗಳ ಬಗ್ಗೆ ಹೈಕಮಾಂಡ್ಗೆ ಸಂಪೂರ್ಣ ವಿವರಣೆ ನೀಡುತ್ತೇವೆ ಎಂದು ತಿಳಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯಿಂದ ಭ್ರಷ್ಟಾಚಾರಿ ಕುಟುಂಬವನ್ನು ರಾಜ್ಯದಿಂದ ಕಿತ್ತೊಗೆಯಬೇಕು. ಹಿಂದುತ್ವ ಇರುವಂತಹ ವ್ಯಕ್ತಿಗಳ ಕೈಯಲ್ಲಿ ನಾಯಕತ್ವ ಇರಬೇಕು. ಬಿಜೆಪಿಯಲ್ಲಿ ಮಹಾಭ್ರಷ್ಟ ಕುಟುಂಬ ಬೇಕಾ, ಪಕ್ಷದ ಕಾರ್ಯಕರ್ತರು ಬೇಕಾ ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದರು.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಚುನಾವಣೆ ನಡೆದರೆ ಮತ್ತೆ ರಾಜ್ಯಾಧ್ಯಕ್ಷರಾಗುವ ವಿಶ್ವಾಸ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿದ ಯತ್ನಾಳ್ ಅವರು, ಠೇವಣಿ ಕಳೆದುಕೊಳ್ಳುವವರು ಕೂಡ ನಾನೇ ಗೆಲ್ಲುತ್ತೇನೆ ಅಂತಾನೆ. ಈಗ ಹೈಕಮಾಂಡ್ನಲ್ಲಿ ಮೂರು ವಿಷಯಗಳು ಸ್ಪಷ್ಟವಾಗಬೇಕು. ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತವಾಗಬೇಕು. ನಾಳೆ ದೆಹಲಿಗೆ ತೆರಳುವ ನಿಯೋಗ ತುಂಬಾ ದೊಡ್ಡದಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರು ಮುಂದುವರಿದರೆ ಬಿಜೆಪಿಗೆ ಇನ್ನೂ ಹೀನಾಯ ಸ್ಥಿತಿ ಎಂದು ಗೊತ್ತಾಗಿದೆ ಎಂದು ಕಿಡಿಕಾರಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…