director prem
ಬೆಂಗಳೂರು: ಎಮ್ಮೆ ಕೊಡಿಸುವುದಾಗಿ ವ್ಯಕ್ತಿಯೋರ್ವ ಖ್ಯಾತ ನಿರ್ದೇಶಕ ಪ್ರೇಮ್ಗೆ 4.5 ಲಕ್ಷ ರೂ ವಂಚನೆ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ.
ಗುಜರಾತ್ ಮೂಲದ ವನರಾಜ್ ಭಾಯ್ ಎಂಬಾತನ ವಿರುದ್ಧ ಚಂದ್ರ ಲೇಔಟ್ ಪೊಲೀಸರು ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಪ್ರೇಮ್ ಅವರ ಮ್ಯಾನೇಜರ್, ನಟ ದಶಾಚರ ಚಂದ್ರು ದೂರು ನೀಡಿದ್ದಾರೆ.
ಪ್ರೇಮ್ ಅವರು ಹೈನುಗಾರಿಕೆ ಮಾಡಲು 2 ಎಮ್ಮೆ ಖರೀದಿಸಲು ಮುಂದಾಗಿದ್ದರು. ಈ ವೇಳೆ ವನರಾಜ್ ಪ್ರೇಮ್ ಸಂಪರ್ಕಕ್ಕೆ ಬಂದು ನಿಮಗೆ ಒಳ್ಳೆಯ ಎಮ್ಮೆ ಕೊಡಿಸುತ್ತೇನೆ ಎಂದು 4.5 ಲಕ್ಷ ರೂ ಹಣ ಪಡೆದಿದ್ದನು. ನಂತರ ವಾಟ್ಸಾಪ್ ಮೂಲಕ ಎಮ್ಮೆಯ ವಿಡಿಯೋ ಕೂಡ ಕಳುಹಿಸಿದ್ದಾನೆ.
ಕೊನೆಗೆ ಎಮ್ಮೆಯೂ ಇಲ್ಲ, ಕೊಟ್ಟ ಹಣವೂ ಇಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ವನರಾಜ್ ಎಸ್ಕೇಪ್ ಆಗಿದ್ದಾನೆ. ನಂತರ ತಾನು ಮೋಸ ಹೋದೆ ಎಂದು ಅರಿತ ಪ್ರೇಮ್ ದೂರು ದಾಖಲಿಸಿದ್ದಾರೆ. ತಾಯಿ ಭಾಗ್ಯಮ್ಮ ಅವರ ಹೆಸರಿನಲ್ಲಿ ಸ್ವಂತ ಡೈರಿ ಫಾರ್ಮ್ ನಿರ್ಮಿಸಲು ಪ್ರೇಮ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…