ಬೆಂಗಳೂರು: ಖ್ಯಾತ ಜನಪದ ಗಾಯಕ, ಸಾಹಿತಿ ಹಾಗೂ ಕನ್ನಡಪರ ಹೋರಾಟಗಾರ ಆಲೂರು ನಾಗಪ್ಪ ಅವರು ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಕಳೆದ ಕೆಲ ದಿನಗಳಿಂದ ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಆಲೂ ರು ನಾಗಪ್ಪ ಅವರನ್ನು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಾಗಪ್ಪ ವಿಧಿವಶರಾಗಿದ್ದು, ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ.
ಆಲೂರು ನಾಗಪ್ಪ ಅವರು ಸಾವಿರಾರು ಲಾವಣಿ ಹಾಗೂ ತತ್ವಪದಗಳ ಹರಿಕಾರ. ಇವರಿಗೆ ಜಾನಪದ ಹಾಗೂ ಸಂಗೀತದ ಮೇಲೆ ಇದ್ದ ಪ್ರೀತಿ ಅಷ್ಟಿಷ್ಟಲ್ಲ.
ಕನ್ನಡಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದ ಆಲೂರು ನಾಗಪ್ಪ ಅವರು, ಕನ್ನಡದ ಏಳಿಗೆಗಾಗಿ ಶ್ರಮ ವಹಿಸಿ ದುಡಿದಿದ್ದಾರೆ.
ನಿಂಗವ್ವ ಬೆಂಗಳೂರಿಗೆ ಬಂದು ನೋಡವ್ವ ಹಾಡಿನ ಖ್ಯಾತಿಯ ಆಲೂರು ನಾಗಪ್ಪ ಅವರು, ಸಾವಿರಾರು ಲಾವಣಿ, ತತ್ವಪದಗಳನ್ನು ರಚಿಸಿದ್ದಾರೆ.
ಆಲೂರು ನಾಗಪ್ಪ ಅವರ ನಿಧನಕ್ಕೆ ಗಣ್ಯಾತಿಗಣ್ಯರು ಹಾಗೂ ಸಾಹಿತಿಗಳು ಸಂತಾಪ ಸೂಚಿಸಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಇನ್ನೂ ಆಲೂರು ನಾಗಪ್ಪ ಅವರ ಅಂತ್ಯಸಂಸ್ಕಾರ ಬಿಡದಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…