ಬೆಂಗಳೂರು: ಖ್ಯಾತ ಜನಪದ ಗಾಯಕ, ಸಾಹಿತಿ ಹಾಗೂ ಕನ್ನಡಪರ ಹೋರಾಟಗಾರ ಆಲೂರು ನಾಗಪ್ಪ ಅವರು ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಕಳೆದ ಕೆಲ ದಿನಗಳಿಂದ ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಆಲೂ ರು ನಾಗಪ್ಪ ಅವರನ್ನು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಾಗಪ್ಪ ವಿಧಿವಶರಾಗಿದ್ದು, ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ.
ಆಲೂರು ನಾಗಪ್ಪ ಅವರು ಸಾವಿರಾರು ಲಾವಣಿ ಹಾಗೂ ತತ್ವಪದಗಳ ಹರಿಕಾರ. ಇವರಿಗೆ ಜಾನಪದ ಹಾಗೂ ಸಂಗೀತದ ಮೇಲೆ ಇದ್ದ ಪ್ರೀತಿ ಅಷ್ಟಿಷ್ಟಲ್ಲ.
ಕನ್ನಡಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದ ಆಲೂರು ನಾಗಪ್ಪ ಅವರು, ಕನ್ನಡದ ಏಳಿಗೆಗಾಗಿ ಶ್ರಮ ವಹಿಸಿ ದುಡಿದಿದ್ದಾರೆ.
ನಿಂಗವ್ವ ಬೆಂಗಳೂರಿಗೆ ಬಂದು ನೋಡವ್ವ ಹಾಡಿನ ಖ್ಯಾತಿಯ ಆಲೂರು ನಾಗಪ್ಪ ಅವರು, ಸಾವಿರಾರು ಲಾವಣಿ, ತತ್ವಪದಗಳನ್ನು ರಚಿಸಿದ್ದಾರೆ.
ಆಲೂರು ನಾಗಪ್ಪ ಅವರ ನಿಧನಕ್ಕೆ ಗಣ್ಯಾತಿಗಣ್ಯರು ಹಾಗೂ ಸಾಹಿತಿಗಳು ಸಂತಾಪ ಸೂಚಿಸಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಇನ್ನೂ ಆಲೂರು ನಾಗಪ್ಪ ಅವರ ಅಂತ್ಯಸಂಸ್ಕಾರ ಬಿಡದಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…