ರಾಜ್ಯ

ರೈತರ ಆತ್ಮಹತ್ಯೆ : ಪರಿಹಾರ ವಿಳಂಬಕ್ಕೆ ಸಿಎಂ ಗರಂ

ಬೆಂಗಳೂರು : ಜಿಲ್ಲಾವಾರು ರೈತರ ಆತ್ಮಹತ್ಯೆ ಅಂಕಿ ಅಂಶಗಳನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ 13 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ನೋಡಿ ಗರಂ ಆಗಿ ಜಿಲ್ಲಾಧಿಕಾರಿಗಳಿಂದ ವರದಿ ಪಡೆದರು.

ಶುಕ್ರವಾರ ವಿಧಾನಸೌಭದ ಕೊಠಡಿಯಲ್ಲಿ ಎಲ್ಲಾ ಜಿಲ್ಲೆಗಳ ಡಿಸಿ, ಎಸ್.ಪಿ ಹಾಗೂ ಸಿಇಒಗಳ ಜೊತೆ ನಡೆದ ಸಭೆಯಲ್ಲಿ ಮಾಹಿತಿ ಪಡೆದ ಅವರು, ಹಾವೇರಿ ಸೇರಿ ಇನ್ನೆರಡು ಜಿಲ್ಲೆಗಳಲ್ಲಿ ಒಟ್ಟು 13 ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ಆದಷ್ಟು ಬೇಗ ಬಗೆಹರಿಸಿ ಪರಿಹಾರ ಒದಗಿಸಿ ಎನ್ನುವ ಸೂಚನೆ ನೀಡಿದರು.

ಭೂಕುಸಿತ: ತಕ್ಷಣ ತೆರಳುವಂತೆ ಸೂಚಿನೆ
ರಾತ್ರಿ ಬಿದ್ದ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಕುಸಿತ, ಗೋಡೆ ಕುಸಿತ ಆಗಿ ಸಾವು ಸಂಭವಿಸಿರುವ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿದ ಮುಖ್ಯಮಂತ್ರಿಗಳು, ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ವರದಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ದ.ಕ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.‌

ಅನರ್ಹ ಪಡಿತರ ಚೀಟಿಗಳು ಇನ್ನೂ ಹೇಗೆ ಉಳಿದುಕೊಂಡಿವೆ: ಸಿ.ಎಂ ಪ್ರಶ್ನೆ

ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಆದರೆ ಇದರಲ್ಲಿ ನಿರೀಕ್ಷಿತ ಪ್ರಗತಿ ಯಾಕೆ ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಸುಮಾರು ಶೇ. 74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚನೆ ನೀಡಿಯಾಗಿತ್ತು. ಆದರೂ ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ ಏಕೆ ಎಂದು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

1 min ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

12 mins ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

17 mins ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

24 mins ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

22 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

22 hours ago