ರಾಜ್ಯ

ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು: ಸಿ.ಎಂ.ಸಿದ್ದರಾಮಯ್ಯ

ವಿಜ್ಞಾನ ಓದಿ ಕರ್ಮಸಿದ್ಧಾಂತ ನಂಬಿದರೆ, ಮೌಡ್ಯಕ್ಕೆ ಜೋತು ಬಿದ್ದರೆ ಅಂಥಾ ಶಿಕ್ಷಣ ನಿರರ್ತಕ: ಸಿಎಂ

ಬೆಂಗಳೂರು: ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದ ಎರಡನೇ ರಾಷ್ಟ್ರಾಧ್ಯಕ್ಷರಾಗಿದ್ದ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಲು ಸಾಧ್ಯವಾಗಿದೆ ಅಂದರೆ, ಇದೇ ಸಾಧ್ಯತೆ ಎಲ್ಲಾ ಶಿಕ್ಷಕರಿಗೂ ಇದ್ದೇ ಇರುತ್ತದೆ. ಹೀಗಾಗಿ ಪ್ರತಿಯೊಬ್ಬ ಶಿಕ್ಷಕರೂ ರಾಧಾಕೃಷ್ಣನ್ ಅವರ ಮಾರ್ಗದಲ್ಲಿ ನಡೆಯಲು ಪ್ರಯತ್ನಿಸಬೇಕು ಎಂದರು.

ಪ್ರತಿಯೊಬ್ಬ ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವವರು ನಮ್ಮ ಶಿಕ್ಷಕರು. ಇದು ಶಿಕ್ಷಕರ ಮೂಲಭೂತ ಜವಾಬ್ದಾರಿ ಎಂದರು.

ಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಅತಿ ಹೆಚ್ಚಾಗಿದ್ದಾರೆ. ಹೀಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ ಎಂದರು.

ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವಂತೆ ರೂಪಿಸುವುದೇ ಶಿಕ್ಷಕರ ಜವಾಬ್ದಾರಿ. ವೈಜ್ಞಾನಿಕತೆ ಮತ್ತು ವೈಚಾರಿಕತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡರೆ ಮಾತ್ರ ಅವರಿಗೆ ಸಮಾಜ ಅರ್ಥ ಆಗುತ್ತದೆ. ಸಮಾಜದ ಸಮಸ್ಯೆಗಳಿಗೆ ಪರಿಹಾರ ರೂಪಿಸುತ್ತಾರೆ ಎಂದರು.

ವಿಜ್ಞಾನ ಓದಿರುವ ವಿದ್ಯಾರ್ಥಿಗಳೂ ಮೌಡ್ಯಕ್ಕೆ ಜೋತು ಬೀಳುವುದು, ಜಾತಿ ತಾರತಮ್ಯ ಮಾಡುವುದಾದರೆ ಅವರಿಗೆ ಸಿಕ್ಕ ಶಿಕ್ಷಣಕ್ಕೆ ಅರ್ಥ ಇರುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳನ್ನು ವೈಚಾರಿಕವಾಗಿ ರೂಪಿಸುವ ಜವಾಬ್ದಾರಿ ಶಿಕ್ಷಣದ್ದಾಗಿದೆ ಎಂದರು.

ಎಲ್ಲರಿಗೂ ಶಿಕ್ಷಣ ದೊರಕದಂತೆ ತಡೆಯುತ್ತಿದ್ದ ಕಾಲ ಈಗ ಇಲ್ಲ. ಈಗ ಪ್ರತಿಯೊಬ್ಬರಿಗೂ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಕಡ್ಡಾಯ ಶಿಕ್ಷಣದ ಜೊತೆಗೆ ಅತ್ಯುತ್ತಮ ವ್ಯಕ್ತಿತ್ವಗಳನ್ನು ರೂಪಿಸುವ ರೂವಾರಿಗಳು ನಮ್ಮ ಶಿಕ್ಷಕರು ಎಂದು ಮೆಚ್ಚುಗೆ ಸೂಚಿಸಿದರು.

ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮಾನವೀಯ ಜವಾಬ್ದಾರಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಶಿಕ್ಷಕರಿಂದ, ಶಿಕ್ಷಣದಿಂದ ಮಾತ್ರ ಸಾಧ್ಯ. 800 ವರ್ಷಗಳ ಹಿಂದೆಯೇ ಕರ್ಮ ಸಿದ್ಧಾಂತವನ್ನು ಬಸವಾದಿ ಶರಣರು ತಿರಸ್ಕರಿಸಿದ್ದರು. ಆದರೂ ಇವತ್ತಿನ ಶಿಕ್ಷಕರೂ ಹಣೆಬರಹ ಮುಂತಾದ ಕರ್ಮಸಿದ್ಧಾಂತವನ್ನು ನಂಬುತ್ತಾರೆ. ಇದು ಸರಿಯಲ್ಲ ಎಂದು ಹೇಳಿದರು.

ಸಾವಿತ್ರಿ ಬಾಯಿ ಫುಲೆ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳು ಇಡೀ ಶಿಕ್ಷಕ ಸಮುದಾಯಕ್ಕೆ ಮಾದರಿಯಾಗಲಿ ಎಂದು ಹಾರೈಸುತ್ತೇನೆ ಎಂದರು.

ಶಿಕ್ಷಕರ ಸಮಸ್ಯೆಗಳನ್ನು ಶಿಕ್ಷಕರ ಸಂಘದ ಜೊತೆ ಸೇರಿ ಸುದೀರ್ಘವಾಗಿ ಚರ್ಚಿಸಿದ್ದೇನೆ. ಪದವಿಪೂರ್ವ ಶಿಕ್ಷಕರ ಸಮಸ್ಯೆಗಳು ಅರ್ಥವಾಗಿದೆ. ಇವುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಪ್ರಾಥಮಿಕ‌ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು, ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು, ಶಿಕ್ಷಕರ‌ ಮತ್ತು ಉಪನ್ಯಾಸಕರ ಸಂಘಟನೆಗಳ ಪದಾಧಿಕಾತಿಗಳು ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ರಿಜ್ವಾನ್ ಅರ್ಷದ್ ವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

7 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

7 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

8 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

8 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

8 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

8 hours ago