Farmers Attempt to Lay Siege to CM's House Protesting Land Acquisition
ಬೆಂಗಳೂರು : ದೇವನಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕೈಗಾರಿಕೆಗಾಗಿ ನಡೆದಿರುವ ಭೂಸ್ವಾಧೀನವನ್ನು ಕೈಬಿಡುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಿದರು.
ಬಹುಭಾಷಾ ನಟ ಪ್ರಕಾಶ್ ರೈ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಗಾಂಧಿ ಭವನದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯವರೆಗೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಪ್ರಗತಿಪರ ಸಂಘಟನೆಗಳ ನಾಯಕರನ್ನು ಕುಮಾರಕೃಪ ಅತಿಥಿಗೃಹದ ಬಳಿ ಪೊಲೀಸರು ತಡೆದರು.
ಬಳಿಕ ಪ್ರಕಾಶ್ ರೈ ನೇತೃತ್ವದಲ್ಲಿ ನಿಯೋಗವೊಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಭೂಸ್ವಾಽನದ ಪ್ರಕ್ರಿಯೆಯನ್ನು ಕೈಬಿಡುವಂತೆ ಒತ್ತಾಯಿಸಿದೆ.
ದೇವನಹಳ್ಳಿ ಹಾಗೂ ಸುತ್ತಮುತ್ತಲೂ ಫಲವತ್ತಾದ ಜಮೀನಿದ್ದು, ಅದನ್ನು ಕೈಗಾರಿಕೆಗಳಿಗೆ ಸ್ವಾಽನಪಡಿಸಿಕೊಳ್ಳುವುದು ಸರಿಯಲ್ಲ. ರೈತರು ಭೂಮಿ ಕಳೆದುಕೊಳ್ಳಲು ಸಿದ್ಧರಿಲ್ಲ ಎಂದು ನಿಯೋಗ ಮುಖ್ಯಮಂತ್ರಿಯವರ ಗಮನಕ್ಕೆ ತಂದಿದೆ. ಈ ಬಗ್ಗೆ ಪರಿಶೀಲಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿರುವುದಾಗಿ ತಿಳಿದುಬಂದಿದೆ.
ಜು.೪ರಂದು ಸಭೆ
ಜುಲೈ ೪ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇವನಹಳ್ಳಿ ಚನ್ನರಾಯಪಟ್ಟಣ ರೈತ ಹೋರಾಟಗಾರರು ಮತ್ತು ಸಂಯುಕ್ತ ಹೋರಾಟ ವೇದಿಕೆ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಗುರುವಾರ ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ರೈತ ಮುಖಂಡರ ಜೊತೆ ಈ ಬಗ್ಗೆ ಚರ್ಚಿಸಿದ ಮುಖ್ಯಮಂತ್ರಿಗಳು ಜುಲೈ ೪ರ ಬೆಳಗ್ಗೆ ೧೧ ಗಂಟೆಗೆ ರೈತರ ಬೇಡಿಕೆ ಮತ್ತು ಸಮಸ್ಯೆ ಕುರಿತಾಗಿ ಸಮಗ್ರ ಸಭೆ ನಡೆಸುವುದಾಗಿ ತಿಳಿಸಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…