ರಾಜ್ಯ

ಭೂಸ್ವಾಧೀನಕ್ಕೆ ವಿರೋಧಿಸಿ ಸಿಎಂ ಮನೆಗೆ ರೈತರ ಮುತ್ತಿಗೆ ಯತ್ನ

ಬೆಂಗಳೂರು : ದೇವನಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕೈಗಾರಿಕೆಗಾಗಿ ನಡೆದಿರುವ ಭೂಸ್ವಾಧೀನವನ್ನು ಕೈಬಿಡುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಿದರು.

ಬಹುಭಾಷಾ ನಟ ಪ್ರಕಾಶ್ ರೈ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಗಾಂಧಿ ಭವನದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯವರೆಗೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಪ್ರಗತಿಪರ ಸಂಘಟನೆಗಳ ನಾಯಕರನ್ನು ಕುಮಾರಕೃಪ ಅತಿಥಿಗೃಹದ ಬಳಿ ಪೊಲೀಸರು ತಡೆದರು.

ಬಳಿಕ ಪ್ರಕಾಶ್ ರೈ ನೇತೃತ್ವದಲ್ಲಿ ನಿಯೋಗವೊಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಭೂಸ್ವಾಽನದ ಪ್ರಕ್ರಿಯೆಯನ್ನು ಕೈಬಿಡುವಂತೆ ಒತ್ತಾಯಿಸಿದೆ.

ದೇವನಹಳ್ಳಿ ಹಾಗೂ ಸುತ್ತಮುತ್ತಲೂ ಫಲವತ್ತಾದ ಜಮೀನಿದ್ದು, ಅದನ್ನು ಕೈಗಾರಿಕೆಗಳಿಗೆ ಸ್ವಾಽನಪಡಿಸಿಕೊಳ್ಳುವುದು ಸರಿಯಲ್ಲ. ರೈತರು ಭೂಮಿ ಕಳೆದುಕೊಳ್ಳಲು ಸಿದ್ಧರಿಲ್ಲ ಎಂದು ನಿಯೋಗ ಮುಖ್ಯಮಂತ್ರಿಯವರ ಗಮನಕ್ಕೆ ತಂದಿದೆ. ಈ ಬಗ್ಗೆ ಪರಿಶೀಲಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿರುವುದಾಗಿ ತಿಳಿದುಬಂದಿದೆ.

ಜು.೪ರಂದು ಸಭೆ
ಜುಲೈ ೪ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇವನಹಳ್ಳಿ ಚನ್ನರಾಯಪಟ್ಟಣ ರೈತ ಹೋರಾಟಗಾರರು ಮತ್ತು ಸಂಯುಕ್ತ ಹೋರಾಟ ವೇದಿಕೆ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಗುರುವಾರ ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ರೈತ ಮುಖಂಡರ ಜೊತೆ ಈ ಬಗ್ಗೆ ಚರ್ಚಿಸಿದ ಮುಖ್ಯಮಂತ್ರಿಗಳು ಜುಲೈ ೪ರ ಬೆಳಗ್ಗೆ ೧೧ ಗಂಟೆಗೆ ರೈತರ ಬೇಡಿಕೆ ಮತ್ತು ಸಮಸ್ಯೆ ಕುರಿತಾಗಿ ಸಮಗ್ರ ಸಭೆ ನಡೆಸುವುದಾಗಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

3 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

4 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

4 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

4 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

5 hours ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

5 hours ago