ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಿಂದ ಹಾನಿಯಾದ ಬೆಳೆ ಹಾನಿ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಅತೀ ಮಳೆಯಿಂದ ಎಷ್ಟು ಹೆಕ್ಟೇರ್ ಪ್ರದೇಶ ಹಾನಿಯಾಗಿದೆ ಎಂಬುದನ್ನು ಅಂದಾಜಿಸಲಾಗಿದೆ. ಹಾನಿಯಾಗಿರುವ ಬಗ್ಗೆ ಸರ್ವೆಯನ್ನು ಸಹ ಮಾಡಲಾಗಿದೆ. ಭಾರೀ ಮಳೆ ಹಾನಿಯಿಂದ ಹಾನಿಯಾದ ಎಲ್ಲಾ ರೈತರ ಖಾತೆಗಳಿಗೂ ನೇರವಾಗಿ ಹಣ ಪಾವತಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಸಚಿವ ಕೃಷ್ಣಭೈರೇಗೌಡ ಅವರು, 39 ಲಕ್ಷ ರೈತರಿಗೆ 3500 ಕೋಟಿ ರೂ ಬೆಳೆ ಹಾನಿ ಪರಿಹಾರ ನೀಡಲಾಗುತ್ತದೆ. ಯಾವ ರೈತರು ಕೂಡ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರ ಖಾತೆಗೂ ಸದ್ಯದಲ್ಲೇ ಬೆಳೆ ಹಾನಿ ಪರಿಹಾರ ಬರುತ್ತದೆ ಎಂದು ಸ್ಪಷ್ಟಪಡಿಸಿದರು.
ಕೇಂದ್ರ ಸರ್ಕಾರ ನಮಗೆ ನಯಾ ಪೈಸೆಗೂ ಬರ ಪರಿಹಾರ ಬಿಡುಗಡೆ ಮಾಡುತ್ತಿರಲಿಲ್ಲ. ಆದ್ದರಿಂದ ನಾವು ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಿದ್ದೆವು. ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಬಳಿಕವೇ ಕೇಂದ್ರ ಸರ್ಕಾರ ಬರ ಪರಿಹಾರ ನೀಡಿದೆ ಎಂದು ಕಿಡಿಕಾರಿದರು.
ಇನ್ನು ಸದ್ಯದಲ್ಲೇ ಬೆಳೆ ಹಾನಿ ಪರಿಹಾರ ರೈತರ ಖಾತೆಗಳಿಗೆ ಬರಲಿದೆ. ಯಾರೂ ಕೂಡ ಆತಂಕ ಪಡಬೇಡಿ. ನಮ್ಮ ಸರ್ಕಾರ ರೈತರ ಪರ ಇದೆ ಎಂದು ರೈತರಿಗೆ ಭರವಸೆ ನೀಡಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…