ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಿಂದ ಹಾನಿಯಾದ ಬೆಳೆ ಹಾನಿ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಅತೀ ಮಳೆಯಿಂದ ಎಷ್ಟು ಹೆಕ್ಟೇರ್ ಪ್ರದೇಶ ಹಾನಿಯಾಗಿದೆ ಎಂಬುದನ್ನು ಅಂದಾಜಿಸಲಾಗಿದೆ. ಹಾನಿಯಾಗಿರುವ ಬಗ್ಗೆ ಸರ್ವೆಯನ್ನು ಸಹ ಮಾಡಲಾಗಿದೆ. ಭಾರೀ ಮಳೆ ಹಾನಿಯಿಂದ ಹಾನಿಯಾದ ಎಲ್ಲಾ ರೈತರ ಖಾತೆಗಳಿಗೂ ನೇರವಾಗಿ ಹಣ ಪಾವತಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಸಚಿವ ಕೃಷ್ಣಭೈರೇಗೌಡ ಅವರು, 39 ಲಕ್ಷ ರೈತರಿಗೆ 3500 ಕೋಟಿ ರೂ ಬೆಳೆ ಹಾನಿ ಪರಿಹಾರ ನೀಡಲಾಗುತ್ತದೆ. ಯಾವ ರೈತರು ಕೂಡ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರ ಖಾತೆಗೂ ಸದ್ಯದಲ್ಲೇ ಬೆಳೆ ಹಾನಿ ಪರಿಹಾರ ಬರುತ್ತದೆ ಎಂದು ಸ್ಪಷ್ಟಪಡಿಸಿದರು.
ಕೇಂದ್ರ ಸರ್ಕಾರ ನಮಗೆ ನಯಾ ಪೈಸೆಗೂ ಬರ ಪರಿಹಾರ ಬಿಡುಗಡೆ ಮಾಡುತ್ತಿರಲಿಲ್ಲ. ಆದ್ದರಿಂದ ನಾವು ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಿದ್ದೆವು. ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಬಳಿಕವೇ ಕೇಂದ್ರ ಸರ್ಕಾರ ಬರ ಪರಿಹಾರ ನೀಡಿದೆ ಎಂದು ಕಿಡಿಕಾರಿದರು.
ಇನ್ನು ಸದ್ಯದಲ್ಲೇ ಬೆಳೆ ಹಾನಿ ಪರಿಹಾರ ರೈತರ ಖಾತೆಗಳಿಗೆ ಬರಲಿದೆ. ಯಾರೂ ಕೂಡ ಆತಂಕ ಪಡಬೇಡಿ. ನಮ್ಮ ಸರ್ಕಾರ ರೈತರ ಪರ ಇದೆ ಎಂದು ರೈತರಿಗೆ ಭರವಸೆ ನೀಡಿದರು.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…