ರಾಜ್ಯ

ಆಂಧ್ರಪ್ರದೇಶದ ಹಿಂದೂಪುರದಲ್ಲಿ ಎಸ್‌ಕೆಎಂ ರೈತ ಸಂಘಟನೆಗಳ ರೈತ ಜಾಗೃತಿ ಆಂದೋಲನ ಸಭೆ

ಆಂಧ್ರಪ್ರದೇಶ: ಆಂಧ್ರಪ್ರದೇಶದ ಹಿಂದೂಪುರದಲ್ಲಿ ರೈತ ಸಂಘಟನೆಗಳು ಮತ್ತು ರೈತರೊಂದಿಗೆ ಎಸ್‌ಕೆಎಂ ಸಭೆ ನಡೆಸಿತು.

ರಾಷ್ಟ್ರೀಯ ರೈತ ಮುಖಂಡ ಜಗಜೀತ್‌ ಸಿಂಗ್‌ ದಲೇವಾಲ್‌ ಮಾತನಾಡಿ, ಇಡೀ ದೇಶದ ರೈತರು ತಮ್ಮ ಹಕ್ಕುಗಳಿಗಾಗಿ ಒಗ್ಗೂಡಿ ಹೋರಾಟ ನಡೆಸಬೇಕಾಗಿದೆ. ಕಿಸಾನ್‌ ಆಂದೋಲನ-2ನ್ನು ಬಲಪಡಿಸಲು ಮೋರ್ಚಾ ನೀಡುವ ಎಲ್ಲಾ ಕಾರ್ಯಕ್ರಮಗಳನ್ನು ಆಂಧ್ರಪ್ರದೇಶದಲ್ಲೂ ರೈತರು ಒಗ್ಗಟ್ಟಿನಿಂದ ನಡೆಸಬೇಕು. ನಿನ್ನೆ ಬೆಂಗಳೂರಿನಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾದ ರಾಜಕೀಯೇತರ ನಿಯೋಗವು ಕರ್ನಾಟಕ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಮತ್ತು ಕೃಷಿಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರುವ ಪ್ರೊ.ಪ್ರಕಾಶ್‌ ಕಮರೆಡ್ಡಿ ಅವರೊಂದಿಗೆ ಎಂಎಸ್‌ಪಿ ಖಾತರಿ ಕಾಯ್ದೆಯ ವಿಷಯದ ಕುರಿತು ವಿವರವಾದ ಚರ್ಚೆಯನ್ನು ನಡೆಸಿತು ಎಂದರು.

ಮುಂದುವರಿದು ಮಾತನಾಡಿದ ಅವರು, ಫೆಬ್ರವರಿ.13ರಿಂದ ನಾಲ್ಕು ಸ್ಥಳಗಳಲ್ಲಿ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾಯ್ದೆಗಾಗಿ ನಮ್ಮ ಪ್ರತಿಭಟನೆ ನಡೆಯುತ್ತಿದೆ. ಹಾಗೂ ಸಾವಿರಾರು ರೈತರು 136 ದಿನಗಳಿಗಿಂತ ಹೆಚ್ಚು ಕಾಲ ರಸ್ತೆಗಳಲ್ಲಿ ಧರಣಿ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಈ ಪ್ರತಿಭಟನೆ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ತನ್ನ ವಿರೋಧಿ ನೀತಿಯನ್ನು ಬದಲಾಯಿಸದಿದ್ದರೆ ರೈತರ ವಿರೋಧ ಎದುರಿಸಬೇಕಾಗುತ್ತದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹರಿಯಾಣ, ಮಹಾರಾಷ್ಟ್ರ, ಜಾರ್ಖಂಡ್‌ ಸೇರಿದಂತೆ ಎಲ್ಲಾ ರಾಜ್ಯಗಳ ರೈತರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ ಎಂದರು.

ಬಳಿಕ ದಕ್ಷಿಣ ಭಾರತ ರಾಜ್ಯಗಳ ಸಂಚಾಲಕ ಕುರುಬೂರು ಶಾಂತಕುಮಾರ್‌ ಮಾತನಾಡಿ, ಜುಲೈ.8ರಂದು ಎಸ್‌ಕೆಎಂ ಮತ್ತು ಕಿಸಾನ್‌ ಮಜ್ದೂರ್‌ ಮೋರ್ಚಾ ಸಂಘಟನೆಗಳು 240 ಬಿಜೆಪಿಯ ಸಂಸದರನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಪಕ್ಷಗಳ ಸಂಸದರಿಗೆ ಜ್ಞಾಪಕ ಪತ್ರ ನೀಡಲಿದ್ದಾರೆ.

ಜುಲೈ ತಿಂಗಳಿನಲ್ಲಿ ಉಭಯ ಮೋರ್ಚಾಗಳಿಂದ ದೆಹಲಿಯಲ್ಲಿ ರೈತ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ಸೆಪ್ಟೆಂಬರ್‌ನಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾ ರಾಜಕಿಯೇತರ ಮತ್ತು ಕಿಸಾನ್‌ ಮುಜ್ದೂರ್‌ ಮೋರ್ಚಾ ನೀಡುವ ಎಲ್ಲಾ ಕಾರ್ಯಕ್ರಮಗಳನ್ನು ನಡೆಸುವುದಾಗಿ ಮಾಹಿತಿ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

2 mins ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

2 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

2 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

2 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

10 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

10 hours ago