ಬೆಳಗಾವಿ: ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿ ಸುವರ್ಣಸೌಧದಲ್ಲಿ ಅಂತರಾಷ್ಟ್ರೀಯ ಸಾವಯುವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಿರಿಧಾನ್ಯ ಉತಾದನೆಯಲ್ಲಿ ದೇಶದಲ್ಲೇ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ಆದ್ದರಿಂದ ರೈತರು ಇದರ ಬೆಳವಣಿಗೆಯಲ್ಲಿ ಮುತುವರ್ಜಿವಹಿಸಬೇಕು ಎಂದರು.
ಇದೇ ಡಿಸೆಂಬರ್ 23, 24, 25, ರಂದು ಅಂತರಾಷ್ಟ್ರೀಯ ಸಾವಯುವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ನಡೆಯಲಿದೆ.
ಪ್ರಪಂಚದಾದ್ಯಂತ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದೆ. ವಿಶ್ವದಲ್ಲಿ 903.61 ಲಕ್ಷ ಟನ್ಗಳಷ್ಟು ಬೆಳೆಯಲಾಗುತ್ತಿದೆ. ಭಾರತವು ವಿಶ್ವದಲ್ಲೇ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ಪಟ್ಟಗಳ ಸಾಲಿನಲ್ಲಿದೆ. ಸುಮಾರು 31.50 ರಷ್ಟು ಸಿರಿಧಾನ್ಯ ಭಾರತದಲ್ಲಿ ಬೆಳೆಯುತ್ತಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷಗಳಷ್ಟು ಸಿರಿಧಾನ್ಯ ಬೆಳೆಯಲಾಗುತ್ತದೆ. ಸಿರಿಧಾನ್ಯಗಳಲ್ಲಿ ಪ್ರೋಟಿನ್ ಹಾಗೂ ನಾರಿನಂಶ ಹೆಚ್ಚಾಗಿದ್ದು, ಮಾನವರಲ್ಲಿ ರೋಗ ನೀರೋಧಕ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಹಾಗೆಯೇ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯಗಳು ಸಹಕಾರಿಯಾಗಿವೆ ಎಂದು ಹೇಳಿದರು.
ಬೆಂಗಳೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…
ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…
ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…