ರಾಜ್ಯ

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಇಬ್ಬರು ಹಾಗೂ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಆರು ಮಂದಿ ಸೇರಿದಂತೆ ಒಟ್ಟು ಎಂಟು ಜನ ಮೃತಪಟ್ಟಿದ್ದಾರೆ.

ಇವರೆಲ್ಲ ಸಂಬಂಧಿಕರು
ಬುಧವಾರ ಸಂಜೆ ತರೀಕೆರೆ ತಾಲ್ಲೂಕಿನ ಉಡೆವಾ ಗ್ರಾಮದಿಂದ ಒಟ್ಟು ೨೩ ಜನರ ತಂಡ ಮಂತ್ರಾಲಯ ಯಾತ್ರೆಗಾಗಿ ಪ್ರವಾಸ ಹಮ್ಮಿಕೊಂಡಿತ್ತು. ಇವರು ಮೂಲತಃ ಕಾರ್ಮಿಕರಾಗಿದ್ದು, ಪರಸ್ಪರ ಸಂಬಂಧಿಕರಾಗಿದ್ದಾರೆ. ಪಿಕ್‌ಅಪ್ ವಾಹನದಲ್ಲಿ ರಾಯರ ದರ್ಶನಕ್ಕೆ ಎಂದು ಮಂತ್ರಾಲಯಕ್ಕೆ ತೆರಳುತ್ತಿದ್ದರು.

ಹಾರುಬೂದಿ ಸಾಗಿಸುತ್ತಿದ್ದ ಟ್ಯಾಂಕರ್ ಮತ್ತು ಪಿಕ್‌ಅಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಈ ಅಪಘಾತದಲ್ಲಿ ತರೀಕೆರೆ ತಾಲ್ಲೂಕಿನ ಉದ್ದೇವಾ ಗ್ರಾಮದ ಪುಟ್ಟಮ್ಮ (೬೫) ಹಾಗೂ ಮೀನಾಕ್ಷಿ (೫೦), ಕಣನಾಯಕನ ಹಳ್ಳಿಯ ಕುಮಾರ (೫೦), ದೀಪಿಕಾ (೪೦), ಬೆಳ್ಳಿ (೫), ಬೇಲೂರು ತಾಲ್ಲೂಕಿನ ಚಟ್ಟನಹಳ್ಳಿ ಗ್ರಾಮದ ಸುನಿಲ್ (೪೦), ಯಶೋದಾ (೬೦), ಲೋಲಾಕ್ಷಿ (೫೦) ಮೃತಪಟ್ಟಿದ್ದಾರೆ.

ಮುಗಿಲು ಮುಟ್ಟಿದ ಆಕ್ರಂದನ – ಗ್ರಾಮದಲ್ಲಿ ನೀರವ ಮೌನ
ಯಾತ್ರೆಗೆ ಹೋಗಿ ರಾಯರ ದರ್ಶನ ಪಡೆದು ಖುಷಿಯಿಂದ ಮನೆಗೆ ಬರುತ್ತಾರೆ ಎಂದು ಕಾಯುತ್ತಿದ್ದ ಉಡೆವಾ ಗ್ರಾಮಸ್ಥರಿಗೆ ಈ ಸುದ್ದಿ ಅತೀವ ಆಘಾತ ತಂದಿದೆ. ಒಂದೇ ಕುಟುಂಬದ ಸದಸ್ಯರು ಮತ್ತು ಸಂಬಂಧಿಕರು ಮೃತಪಟ್ಟಿರುವುದರಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಉಳಿದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

13 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

13 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

13 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

13 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

13 hours ago