ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಇಬ್ಬರು ಹಾಗೂ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಆರು ಮಂದಿ ಸೇರಿದಂತೆ ಒಟ್ಟು ಎಂಟು ಜನ ಮೃತಪಟ್ಟಿದ್ದಾರೆ.
ಇವರೆಲ್ಲ ಸಂಬಂಧಿಕರು
ಬುಧವಾರ ಸಂಜೆ ತರೀಕೆರೆ ತಾಲ್ಲೂಕಿನ ಉಡೆವಾ ಗ್ರಾಮದಿಂದ ಒಟ್ಟು ೨೩ ಜನರ ತಂಡ ಮಂತ್ರಾಲಯ ಯಾತ್ರೆಗಾಗಿ ಪ್ರವಾಸ ಹಮ್ಮಿಕೊಂಡಿತ್ತು. ಇವರು ಮೂಲತಃ ಕಾರ್ಮಿಕರಾಗಿದ್ದು, ಪರಸ್ಪರ ಸಂಬಂಧಿಕರಾಗಿದ್ದಾರೆ. ಪಿಕ್ಅಪ್ ವಾಹನದಲ್ಲಿ ರಾಯರ ದರ್ಶನಕ್ಕೆ ಎಂದು ಮಂತ್ರಾಲಯಕ್ಕೆ ತೆರಳುತ್ತಿದ್ದರು.
ಹಾರುಬೂದಿ ಸಾಗಿಸುತ್ತಿದ್ದ ಟ್ಯಾಂಕರ್ ಮತ್ತು ಪಿಕ್ಅಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಈ ಅಪಘಾತದಲ್ಲಿ ತರೀಕೆರೆ ತಾಲ್ಲೂಕಿನ ಉದ್ದೇವಾ ಗ್ರಾಮದ ಪುಟ್ಟಮ್ಮ (೬೫) ಹಾಗೂ ಮೀನಾಕ್ಷಿ (೫೦), ಕಣನಾಯಕನ ಹಳ್ಳಿಯ ಕುಮಾರ (೫೦), ದೀಪಿಕಾ (೪೦), ಬೆಳ್ಳಿ (೫), ಬೇಲೂರು ತಾಲ್ಲೂಕಿನ ಚಟ್ಟನಹಳ್ಳಿ ಗ್ರಾಮದ ಸುನಿಲ್ (೪೦), ಯಶೋದಾ (೬೦), ಲೋಲಾಕ್ಷಿ (೫೦) ಮೃತಪಟ್ಟಿದ್ದಾರೆ.
ಮುಗಿಲು ಮುಟ್ಟಿದ ಆಕ್ರಂದನ – ಗ್ರಾಮದಲ್ಲಿ ನೀರವ ಮೌನ
ಯಾತ್ರೆಗೆ ಹೋಗಿ ರಾಯರ ದರ್ಶನ ಪಡೆದು ಖುಷಿಯಿಂದ ಮನೆಗೆ ಬರುತ್ತಾರೆ ಎಂದು ಕಾಯುತ್ತಿದ್ದ ಉಡೆವಾ ಗ್ರಾಮಸ್ಥರಿಗೆ ಈ ಸುದ್ದಿ ಅತೀವ ಆಘಾತ ತಂದಿದೆ. ಒಂದೇ ಕುಟುಂಬದ ಸದಸ್ಯರು ಮತ್ತು ಸಂಬಂಧಿಕರು ಮೃತಪಟ್ಟಿರುವುದರಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಉಳಿದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…
ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…
ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…
ರೋಮ್ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…
ಮೈಸೂರು : ಪಬ್ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್ನಲ್ಲಿ…
ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು…