ರಾಜ್ಯ

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಇಬ್ಬರು ಹಾಗೂ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಆರು ಮಂದಿ ಸೇರಿದಂತೆ ಒಟ್ಟು ಎಂಟು ಜನ ಮೃತಪಟ್ಟಿದ್ದಾರೆ.

ಇವರೆಲ್ಲ ಸಂಬಂಧಿಕರು
ಬುಧವಾರ ಸಂಜೆ ತರೀಕೆರೆ ತಾಲ್ಲೂಕಿನ ಉಡೆವಾ ಗ್ರಾಮದಿಂದ ಒಟ್ಟು ೨೩ ಜನರ ತಂಡ ಮಂತ್ರಾಲಯ ಯಾತ್ರೆಗಾಗಿ ಪ್ರವಾಸ ಹಮ್ಮಿಕೊಂಡಿತ್ತು. ಇವರು ಮೂಲತಃ ಕಾರ್ಮಿಕರಾಗಿದ್ದು, ಪರಸ್ಪರ ಸಂಬಂಧಿಕರಾಗಿದ್ದಾರೆ. ಪಿಕ್‌ಅಪ್ ವಾಹನದಲ್ಲಿ ರಾಯರ ದರ್ಶನಕ್ಕೆ ಎಂದು ಮಂತ್ರಾಲಯಕ್ಕೆ ತೆರಳುತ್ತಿದ್ದರು.

ಹಾರುಬೂದಿ ಸಾಗಿಸುತ್ತಿದ್ದ ಟ್ಯಾಂಕರ್ ಮತ್ತು ಪಿಕ್‌ಅಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಈ ಅಪಘಾತದಲ್ಲಿ ತರೀಕೆರೆ ತಾಲ್ಲೂಕಿನ ಉದ್ದೇವಾ ಗ್ರಾಮದ ಪುಟ್ಟಮ್ಮ (೬೫) ಹಾಗೂ ಮೀನಾಕ್ಷಿ (೫೦), ಕಣನಾಯಕನ ಹಳ್ಳಿಯ ಕುಮಾರ (೫೦), ದೀಪಿಕಾ (೪೦), ಬೆಳ್ಳಿ (೫), ಬೇಲೂರು ತಾಲ್ಲೂಕಿನ ಚಟ್ಟನಹಳ್ಳಿ ಗ್ರಾಮದ ಸುನಿಲ್ (೪೦), ಯಶೋದಾ (೬೦), ಲೋಲಾಕ್ಷಿ (೫೦) ಮೃತಪಟ್ಟಿದ್ದಾರೆ.

ಮುಗಿಲು ಮುಟ್ಟಿದ ಆಕ್ರಂದನ – ಗ್ರಾಮದಲ್ಲಿ ನೀರವ ಮೌನ
ಯಾತ್ರೆಗೆ ಹೋಗಿ ರಾಯರ ದರ್ಶನ ಪಡೆದು ಖುಷಿಯಿಂದ ಮನೆಗೆ ಬರುತ್ತಾರೆ ಎಂದು ಕಾಯುತ್ತಿದ್ದ ಉಡೆವಾ ಗ್ರಾಮಸ್ಥರಿಗೆ ಈ ಸುದ್ದಿ ಅತೀವ ಆಘಾತ ತಂದಿದೆ. ಒಂದೇ ಕುಟುಂಬದ ಸದಸ್ಯರು ಮತ್ತು ಸಂಬಂಧಿಕರು ಮೃತಪಟ್ಟಿರುವುದರಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಉಳಿದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

 

 

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ ; ಜೂನ್‌ 4 ಗುರುವಾರ

1 hour ago

ವಿಧಾನಪರಿಷತ್‌ ಚುನಾವಣೆ: ಹರಿಪ್ರಸಾದ್‌ ಸೇರಿ ನಾಲ್ವರಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್‌ ನಾಲ್ಕು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4…

13 hours ago

ನೂತನ ಸಿಎಂ ಡಿ.ಕೆ.ಶಿವಕುಮಾರ್‌ಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಡಿ.ಕೆ.ಶಿವಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ…

14 hours ago

ಡಿಸಿಎಂ ಆಗಿ ಪರಮೇಶ್ವರ್‌ ಮತ್ತು 12 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ 13 ಮಂದಿ ಶಾಸಕರು(ಓರ್ವ ಎಂಎಲ್‌ಸಿ…

15 hours ago

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರು ರಾಜ್ಯದ 25ನೇ…

17 hours ago

ಸೋನಿಯಾ ಗಾಂಧಿ ನನ್ನ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುವೆ: ಡಿಕೆಶಿ

ಬೆಂಗಳೂರು: ಸೋನಿಯಾ ಗಾಂಧಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ…

17 hours ago